ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

March 11, 2021
7:00 AM

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

Advertisement
ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ.  ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ. 
 
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ
April 19, 2026
7:29 AM
by: ಮಿರರ್‌ ಡೆಸ್ಕ್
ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror