MIRROR FOCUS

ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

Advertisement
ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ. ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ.
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

10 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

18 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

23 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

1 day ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago