Advertisement
MIRROR FOCUS

ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

Share

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

Advertisement
ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ. ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ.
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

4 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

4 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

15 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

19 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

20 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago