Advertisement
MIRROR FOCUS

ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

Share

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ. ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ.
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

45 minutes ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

2 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

3 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

3 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

6 hours ago