Advertisement
Opinion

ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ

Share

ತುಳುನಾಡಿನಲ್ಲಿ ದೈವರಾಧನೆಗೆ ಭಾರಿ ಮಹತ್ವ ಇದೆ. ತುಳುನಾಡಿನಲ್ಲಿ ಕೆಲವು ಕೇರಳ ಮೂಲ ದೈವಗಳು ಕೂಡ ಆರಾಧನೆ ಪಡೆಯುತ್ತಿವೆ . ಇವುಗಳಲ್ಲಿ ವಿಷ್ಣುಮೂರ್ತಿ ದೈವ ಕೂಡ ಆಗಿದೆ. ದೈವರಾಧನೆ ಎಂಬುದು ವಿಭಿನ್ನ ಆಚರಣೆ. ಇಲ್ಲಿ ದೈವಗಳು ದೇವರಾಗಲು ಸಾಧ್ಯವಿಲ್ಲ. ದೇವರು ದೈವವಾಗಲು ಸಾಧ್ಯವಿಲ್ಲ. ತುಳುನಾಡಿನ ಮನುಷ್ಯ ಮೂಲ‌ ದೈವಗಳು ಅಘಾತಕಾರಿಯಾದ , ದುರಂತಮಯವಾದ ಕತೆಗಳಿವೆ. ಅನ್ಯಾಯಕ್ಕೆ ಒಳಗಾಗಿ, ವೀರ ಮರಣ ಹೊಂದಿ ದೈವತ್ವಕ್ಕೆ ಏರಿ ಆರಾಧನೆ ಪಡೆಯುತ್ತಿವೆ. ಇಂತಹದೇ ಕಣ್ಣನ್ ಎಂಬ ವ್ಯಕ್ತಿ ವಿಷ್ಣುಮೂರ್ತಿಯಾದ ಕತೆ.…..ಮುಂದೆ ಓದಿ….

Advertisement
Advertisement

ಒತ್ತೆ ಕೋಲದಲ್ಲಿ ಮೊದಲು ಕುಳಿಚ್ಚಾಟ್ ದೈವದ ನರ್ತನ ಸೇವೆಯು ನಡೆಯುತ್ತದೆ. ಇದರಲ್ಲಿ ವಿಷ್ಣುವಿನ ನರಸಿಂಹ ಅವತಾರವಾರವನ್ನು ಅಭಿವ್ಯಕ್ತಿಗೊಳಿಸಲಾಗುತ್ತದೆ. ಉಗ್ರ ನರಸಿಂಹನು ಹಿರಣ್ಯ ಕಶಿಪು ಎಂಬ ರಾಕ್ಷನನ್ನು ಕೊಂದ ಬಗ್ಗೆ ನರ್ತನ ಸೇವೆ ಮೂಲಕ ವರ್ಣಿಸಲಾಗುತ್ತದೆ. ತದನಂತರ ಪ್ರಹ್ಲಾದನನ್ನು ಸಮಾಧಾನ ಮಾಡುವ ರೀತಿಯನ್ನು ನರ್ತನ ಸೇವೆಯನ್ನು ಕಾಣಬಹುದು.

ಒತ್ತೆಕೋಲದ ವಿಷ್ಣು ಮೂರ್ತಿ ದೈವದ ಬಗ್ಗೆ ಜಾನಪದ ವಿಶೇಷ ಕತೆ ಇದೆ : ಉತ್ತರ ಕೇರಳ ಭಾಗದ ನೀಲೇಶ್ವರದ ಕೋಟಾಪುರಂ ಅರಸ ಕುರುವಾವ್ ಕುರುಪ್ ನ ಆಸನದಲ್ಲಿ ಪಾಲಂತಾಯಿ ಕಣ್ಣನ್ ಎಂಬ ತೀಯ ಸಮುದಾಯದ ವ್ಯಕ್ತಿ ಇರುತ್ತಾನೆ. ಸುಂದರವಾದ , ನೀಲಕಾಯದ ಕಣ್ಣನ್ ನಿಗೂ ಅರಸನ ಮಗಳಿಗೂ ಪ್ರೇಮಾಂಕುರವಾಗುತ್ತದೆ . ಗೋವು ಮೇಯಿಸುತ್ತಿದ್ದ ಕಣ್ಣನ್ ಬಳಿ ಅರಸನ ಮಗಳು ಪ್ರೇಮ ನಿವೇದನೆ ಮಾಡುತ್ತಾಳೆ. ಆದರೆ ಜಾತಿ ವಿಚಾರದಲ್ಲಿ ಕಣ್ಣನ್ ನೇರವಾಗಿ ತಿರಸ್ಕರಿಸುತ್ತಾಳೆ. ಇದು ಕುರುವಾವ್ ಕುರುಪ್ ಗೆ ಗೊತ್ತಾಗಿ ನನ್ನ ಮಗಳಿಗೆ ದ್ರೋಹ ಮಾಡಿದ ಎಂದು ಸುಳ್ಳು ಸುದ್ಧಿ ಹರಡಿ ಭಾರಿ ಪ್ರಮಾಣದ ಶಿಕ್ಷೆ ವಿಧಿಸಲು ತೀರ್ಮಾನ ಮಾಡುತ್ತಾನೆ . ಇದರಿಂದ ಭಯ ಭೀತನಾದ ಕಣ್ಣನ್ ಊರು ಬಿಟ್ಟು ,ತುಳುನಾಡಿನ ಬಡಗು ದಿಕ್ಕು ಮಂಗಳೂರಿನ ಜೆಪ್ಪು ಎಂಬಲ್ಲಿಗೆ ಬಂದು ಕುಡಿಪ್ಪಾಡಿ ತರವಾಡು ಮನೆಗೆ ಬರುತ್ತಾನೆ.

ಈ ಮನೆ ಹಿಂದಿನ ಕಾಲದ ಜೈನ ಬಳ್ಳಾಲರಿಗೆ ಸೇರಿದ ಮನೆಯಾಗಿತ್ತು‌. ಈ ಮನೆಯಲ್ಲಿ ತಂಡಲ್ ಮಾದ ಎಂಬ ಅಜ್ಜಿ ಒಬ್ಬಳೇ ವಾಸವಾಗಿದ್ದಳು. ಕಣ್ಣನ್ ನಡೆದು ಬಂದು ಸುಸ್ತಾಗಿ ಮರದ ಕೆಳಗೆ ಮಳಗಿದ್ದನ್ನು ಕಂಡ ಅಜ್ಜಿಯು ಉಪಚರಿಸಿ ತನ್ನ ಮನೆಗೆ ಕರೆದುಕೊಂಡು ಹೋಗುತ್ತಾಳೆ. ಕಣ್ಣನ್ ನ ಎಲ್ಲಾ ವಿಚಾರ ತಿಳಿದು ತನ್ನ ಮನೆಯಲ್ಲೆ ಇರುವಂತೆ ಮನವಿ ಮಾಡತ್ತಾಳೆ. ಈ ಅಜ್ಜಿ ಮನೆಯಲ್ಲಿ ಹಿಂದಿನಿಂದಲೂ ಆರಾಧನೆ ಮಾಡಿಕೊಂಡು ಬಂದ ಪಿಲ್ಚಂಡಿ ದೈವದ ಸಾನಿಧ್ಯಯವಿತ್ತು. ಈ ದೈವದ ಚಾಕರಿಯನ್ನು ಕಣ್ಣನ್ಗೆ ಒಪ್ಪಿಸುತ್ತಾಳೆ. ಕಣ್ಣನ್ ಅಲ್ಲಿ ಬಂದು 12ವರ್ಷ ಆದಮೇಲೆ ಕನಸಿನಲ್ಲಿ ಒಂದು ದಿವ್ಯಶಕ್ತಿಯು ಗೋಚರವಾಗಿ ನೀನು ಇನ್ನು ಸ್ವಂತ ಊರಿಗೆ ಹೋಗಬಹುದು ಎಂದು ತಿಳಿಸಿ ಮಾಯವಾಗುತ್ತದೆ . ಇದನ್ನು ಅಜ್ಜಿಯ ಜೊತೆ ಚರ್ಚೆಮಾಡುತ್ತಾನೆ.ಅದೇ ದಿನ ದೈವಕ್ಕೆ ಇಟ್ಟ ಹಾಲು ಕೂಡ ಮಾಯವಾಗುತ್ತದೆ. ಆಗ ಅಜ್ಜಿ ಕಣ್ಣನ್ ಜೊತೆ ಹಾಲು ಎಲ್ಲಿ ಎಂದು ಕೇಳಿದಾಗ ಕಣ್ಣ್ ನ್ ಗೆ ಪಿಲ್ಚಂಡಿ ದೈವದ ಆವೇಶವಾಗುತ್ತದೆ. ಆಗ ಅಜ್ಜಿ ಇದನ್ನು ಕಣ್ತುಂಬಿಕೊಳ್ಳುತ್ತಾಳೆ.…..ಮುಂದೆ ಓದಿ….

The Rural Mirror WhatsApp Channel ಸೇರಲು ಇಲ್ಲಿ ಕ್ಲಿಕ್‌ ಮಾಡಿ….

ತದನಂತರ ಅಜ್ಜಿ ಕಣ್ಣ ನ್ನು ದೈವದ ಕಡ್ಸಲೆ , ಬಿಳಿ ಬಟ್ಟೆಯನ್ನು ಸುತ್ತಿದ ದೈವದ ಮೊಗದ ಜೊತೆ ಛತ್ರಿ( ಸಿರಿಯಲ್ಲಿ ಮಾಡಿದ್ದು) ಜೊತೆ ಕಳುಹಿಸಿಕೊಡುತ್ತಾಳೆ. ನೇತ್ರಾವತಿ ನದಿ ದಾಟಿ ಬಂದ ಕಣ್ಣನ್ ನ್ನು ಕರತನ್ ಎಂಬ ವ್ಯಕ್ತಿ ಭೇಟಿ ಆಗುತ್ತಾನೆ. ಈ ವಿಚಾರಗಳನ್ನು ಕರತನ್ ಅರಸ ಕರುವಾವ್ ಕುರುಪ್ ಗೆ ತಿಳಿಸುತ್ತಾನೆ . ಅರಸ ಹಳೆ ದ್ವೇಷದಿಂದ ಊರಿನ ಕೆರೆಯೊಂದರಲ್ಲಿ ಮೀಯುತ್ತಿದ್ದ ಕಣ್ಣನ ರುಂಡ ಬೇರ್ಪಡಿಸುತ್ತಾನೆ. ಕಣ್ಣನ್ ತಂದಿದ್ದ ಆಯುಧಗಳನ್ನು ಕೆರೆಗೆ ಬಿಸಾಕಿದನು. ತದನಂತರ ಮನೆಗೆ ತೆರಳಿದ ಅರಸನಿಗೆ ದುರಂತದ ಅನುಭವ ಆಗುತ್ತದೆ.

ಇದನ್ನು ಜ್ಯೋತಿಷ್ಯರ ಮೊರೆ ಹೋದಾಗ ತುಳುನಾಡಿನ ಪಿಲ್ಚಂಡಿ ದೈವ ಕಣ್ಣನ್ ಜೊತೆ ಬಂದಿರುವ ವಿಚಾರ ತಿಳಿಯುತ್ತದೆ. ಆ ದೈವನ್ನು ನರಸಿಂಹ ಅವತಾರದಲ್ಲಿ ಆರಾಧಿಸಬೇಕಂದು ತಿಳಿಸಲಾಯಿತು. ಆದರೆ ಅರಸ ಕುರುವಾವ್ ಕುರುಪ್ ದೈವ ಕೋಟೆ ಭೇಧಿಸಿ ಕೆಂಡ ಸೇವೆ ಮಾಡಿ ಆವಾಹಾರ ಸ್ವೀಕಾರ ಮಾಡಿದರೆ ಮಾತ್ರ ನಂಬುವುದಾಗಿ ಹೇಳುತ್ತಾನೆ. ದಾರಿ ಮುಚ್ಚಿದ ಕೋಟೆ ಕಟ್ಟಿ 108 ಕಟ್ಟಿಗೆಯ ಮೇಲೆರಿ ನಿರ್ಮಿಸಿ ಕೋಳಿ,ಬಾಳೆ,ಹೊದಲು ಮುಂತಾದ ಆಹಾರ ಇರಿಸುತ್ತಾನೆ. ಮಲವ ಸಮುದಾಯದ ವರವೇನು ವರಪ್ಪನ್ ಎಂಬ ವ್ಯಕ್ತಿಗೆ ದೈವದ ಆವೇಶ ಭರಿಸಲು ಸೂಚಿಸಲಾಯಿತು. ವರವೇನು ವರಪ್ಪನ್ಗೆ ಕನಸಿನಲ್ಲಿ ಅಗೋಚರ ಶಕ್ತಿ ಬಂದು ವಿಷ್ಣುಮೂರ್ತಿ ದೈವ ಕಟ್ಟುವ ರೀತಿಯ ಬಗ್ಗೆ ತಿಳಿ ಹೇಳಲಾಯಿತು ಎಂದು ಕತೆ ಇದೆ.

ದೈವ ಕಟ್ಟಿ ಆವೇಶ ಭರಿತನಾದ ವರವೇನು ವರಪ್ಪನ್ ಕೋಟೆ ಬೇಧಿಸಿ ಕೆಂಡ ಸೇವೆ ಮಾಡಲು ಅಣಿಯಾಗುತ್ತಾನೆ. ಆಗ ಕುರುವಾವ್ ಕರುಪ್ಪನ್ ಸಮುದಾಯದವರು ತಡೆಯುತ್ತಾರೆ . ತದನಂತರ ಕೋಟೆ ಭೇಧಿಸಿ ಕೆಂಡ ಸೇವೆಯನ್ನು ವಿಷ್ಣು ಮೂರ್ತಿ ದೈವ ಮಾಡುತ್ತದೆ. ವಿಷ್ಣು ಮೂರ್ತಿ ದೈವವೂ ಸುಳ್ಯ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಗೌಡ ಜನಾಂಗದ ಮನೆ ದೈವವಾಗಿ ಆರಾಧಿಸಲ್ಪಡುತ್ತಿದೆ. ಒತ್ತೆಕೋಲದ ಆರಂಭದಲ್ಲಿ ಶಾಂತಕಾರಂ ಭುಜಗ ಶಯನಂ, ಪದ್ಮನಾಭಂ ಸುರೇಶಂ,ವಿಷ್ಣುಧಾರಂ,ಗಗನ ಸದೃಶಂ,ಮೇಘವರ್ಣಂ ಶುಭಾಂಗಂ ಲಕ್ಷ್ಮಿ ಕಾತಂ ಕಮಲಂ ನಯನಂ ಯೋಗಿ ಹೃದ್ಯಾನ ಗಮ್ಯಂ,ವಂದೇ ವಿಷ್ಣುಂ ,ಭವ ಭಯ‌ ವರದಂ ಸರ್ವ ಲೋಕಾಕೈನಾಥಂ ಎಂದು ಸಂಸ್ಕೃತ ಮಿಶ್ರಿತ ಶ್ಲೋಕ ಹೇಳುವ ಮೂಲಕ ಆರಂಭಿಸುತ್ತಾರೆ.
ವಿಷ್ಣು ಮೂರ್ತಿಯ ನುಡಿಗಟ್ಟಿನಲ್ಲಿ ದೈವದ ಹಿಂದಿನ ಕತೆಯನ್ನು ಹೀಗೆ ಹೇಳಾಗುತ್ತದೆ.

ಮಂಗಳಾಪುರತ್ತೆ ಕೋಯಿಲ್ ಕುಡುಪ್ಪಾಡಿ ಬೀಡ್ ಆಧಾರಮಾಯಿ ನಾಡ್ ತೇಜ ಕಣ್ಣನೆ ಕಂಡಿಟ್ಟಿ ಕಣ್ಣನೇ ಕೆಯ್ಯೆ ಪಿಡಿಚ್ಚು ಒರಿ ವ್ಯಾಯವಟ್ಟಕಾಲಂ ಕಣ್ಣನ್ ತನ್ನೇ ಪಾಲಮೃತಂ ಅಮೃತವಿಚ್ಚಿ ಎನ್ನಿತೊ ಮೂನರ ಕೋಟಿ ತುಳುವನ್ ಪಿಲಿಭೂತಂ ಎನ್ನ ಪೇರುಂ ವಿಚ್ಚ್ ವಿಳಿಚ್ಚು. ತುಳುನಾಡಿನ್ನ್ ಮಲನಾಡಿ ಕಾಣಮೆನ್ನ್ ಕರುದಿ ಪಾಲಂದಾಯಿ ಕಣ್ಣನೇ ಕೂಡಿ ಕೋಲತ್ತ್ ನಾಡಿಲೆಕ್ಕ್ ಕೈಯೆಡುತ್ತ್, ಕದಳಿಕೊಳಂ ಸಮೀಪಿಕ್ಯೂಂ ಕುರುವಾಡನ್ ಅಂಗಬಾಡಿ ಕಣ್ಣನೇ ನಾಶಂ ಚೆಯ್ದು. ಕುರುವಾಡನ್ ವೀಡ್ ಚೆಂಡಾಡಿಚ್ಚ ಕಳಮಾಯಿ ತೀರ್ತು. ಶೇಷಂ ಕೋಟಕ್ ಪುರಮೆ ಮೇಲೇರಿಯುಂ ಕೊಟ್ಟಿ ಏಳ್ ದಿವಸತ್ತೇ ಅತ್ತಂ ತೋತ್ತಂ ಕೈಪಿಚ್ಚು ಎಟ್ಟಾಂ ದಿವಸಂ ಕೋಟಾಯುಂ ತಗರ್ತ್ ದುಷ್ಟಮ್ಮಾರೆ ನಿಗ್ರಹಿಚ್ಚು ,ಭಕ್ತಮ್ಮಾರೆ ಉದರಿಚ್ಚ್ ನೂಟ್ಟಿ ಅರವದ್ ಗಾವುದಂ ಭೂಮಿಕ್ಕ್ ಅಡವಿಡೆ ಮಹಾವಿಷ್ಣು ಮೂರ್ತಿಯೆನ್ನ್ ನೆಲನಿನ್ನು.ಪಂಡ್ ಪರದೇವತ ದೇವಾರ್ನುಾಕ್ಕುಂ ಆಯಿಟ್ ತಪಸ್ವಿಗಳ್ಕ್ ಆಯಿಟ್‌ ಕಾಣಾಂಕಿಟ್ಟತ್ತಾ ಮಾಯೆ ಕಲಿಕಾಲತ್ತ್ ಕಣ್ಣನೆ ನಿಮಿತ್ತಂ ಕೋಟಾಪುರಂ ಮೊಗೆಯಂಡೆ ಪಡಿಞಾಟ್ಟಾಯಿಲ್ ಎಲ್ಲಾವರ್ಕ್ ಕಂಡ್ಕಿಟ್ಟಿ… ಎಂದು ದೈವದ ಹಿನ್ನೆಲೆ ಬಗ್ಗೆ ಹೇಳಲಾಗಿದೆ

ಬರಹ :
ಭಾಸ್ಕರ ಗೌಡ ಜೋಗಿಬೆಟ್ಟು
ಭಾಸ್ಕರ ಜೋಗಿಬೆಟ್ಟು

(ಭಾಸ್ಕರ ಜೋಗಿಬೆಟ್ಟು ಅವರು ಹವ್ಯಾಸಿ ಬರಹಗಾರ, ದೈವಾರಾಧನೆ ಹಾಗೂ ಜಾನಪದ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

8 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago