ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಅವರ ಪುತ್ರ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…