Advertisement
ಸುದ್ದಿಗಳು

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

Share

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಭೆಯಲ್ಲಿ “ಮಹಿಳೆ ಮತ್ತು ಕಾನೂನು”  ಬಗ್ಗೆ ನ್ಯಾಯವಾದಿ ಲತಾಕುಮಾರಿ ಅವರು ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಆಗುವ ಶೋಷಣೆಯನ್ನು ತಪ್ಪಿಸಲು ಮತ್ತು ಭಯವನ್ನು ಹೋಗಲಾಡಿಸಲು ಕಾನೂನಿನ ಅರಿವು ಹೊಂದಿರಬೇಕು. ಹಲವು ದೌರ್ಜನ್ಯವನ್ನು ತಪ್ಪಿಸಲು ಇಂದಿನ ದಿನಗಳಲ್ಲಿ ಹೊಸ ಹೊಸ ಕಾನೂನನ್ನು ಜಾರಿಗೆ ತರಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ 14ನೇ ವಿಧಿಯಲ್ಲಿ ಬರುವ ಸಮಾನತೆಯ ಬಗ್ಗೆ ತಿಳಿಸಿದರು.

NRLMನ ಮೇರಿ ಎಸ್‌   ಅವರು  ಸಂಜೀವಿನಿ ಒಕ್ಕೂಟದ ಮೂಲಕ ಯೋಜನೆ ಸದುಪಯೋಗಪಡಿಸಿಕೊಳ್ಳಬಹುದು ಎಂದರು.”ರಾಷ್ಟೀಯ ಕೃಷಿ ವಿಕಾಸ ಯೋಜನೆ”  ಬಗ್ಗೆ ಡಾ. ಅಶ್ವತಿ ,ತಾಳೆ ಕೃಷಿಯ ಬಗ್ಗೆ ಆಲೆಟ್ಟಿ ಗ್ರಾಮದ ಪ್ರಗತಿಪರ ಕೃಷಿಕರಾದ  ಅಶೋಕ್ ಪ್ರಭು , ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ, ಕಾನೂನು ಬಗ್ಗೆ ದೀಪಿಕಾ ಪಿ, ಮಹಿಳಾ ಸಬಲೀಕರಣದ ಬಗ್ಗೆ ಅನುಷ್ಯ ,ಸ್ವಸಹಾಯ ಸಂಘಗಳ ಬಗ್ಗೆ  ಅವಿನಾಶ್ ಡೆಲ್ಲಾರಿಯೋ, ಬ್ಯಾಂಕ್ ನಿಂದ ಸಿಗಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಸುಜಾತ ಮಾಹಿತಿ ನೀಡಿದರು.

ಶಿಲ್ಪಾ ಸನತ್ ಅಧ್ಯಕ್ಷರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ, ತಾಳೆ ಬೆಳೆ ಕೃಷಿ 3F ಆಯಿಲ್ ಕಂಪನಿಯ ಕ್ಲಸ್ಟರ್ ಸೂಪರ್ ವೈಸರ್ ಸುಳ್ಯ ವಲಯ ಶ್ರೀ ರವಿಶಂಕರ್,  ಪುಷ್ಪಲತಾ ಕೆ ಆರ್ PHC ಅರಂತೋಡು,  ಚಿತ್ರ ಐ CHO ಗೂನಡ್ಕ,  ಹರ್ಷಿತ CHO ಗೂನಡ್ಕ, ಗ್ರಾಮ ಪಂಚಾಯತ್ ನ ಗೌರವಾನ್ವಿತ ಸದಸ್ಯರುಗಳಾದ  ಲೆಸ್ಸಿ ಮೊನಾಲಿಸಾ,  ಜಗದೀಶ್ ರೈ,  ರಜನಿ ಶರತ್, ಸುಶೀಲಾ ಪಿ, ಮಾಜಿ ಅಧ್ಯಕ್ಷರಾದ  ಯಮನ ಬಿ ಎಸ್, ಸುಂದರಿ ಮುಂಡಡ್ಕ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು, ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದು ಮಾಹಿತಿಯನ್ನು ಪಡೆದುಕೊಂಡರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ  ಸರಿತಾ ಓಲ್ಗಾ ಡಿ’ಸೋಜಾ ಎಲ್ಲರನ್ನೂ ಸ್ವಾಗತಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಕಾರ್ಯಕ್ರಮ ನಿರೂಪಿಸಿದರು.  ಗ್ರಾಮ ಪಂಚಾಯತ್ ಸದಸ್ಯರಾದ ರಜನಿ ಶರತ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

9 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago