Advertisement
ಸುದ್ದಿಗಳು

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

Share

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಜರಗಿತು.

Advertisement

ಈ ಸಭೆಯಲ್ಲಿ “ಮಹಿಳೆ ಮತ್ತು ಕಾನೂನು”  ಬಗ್ಗೆ ನ್ಯಾಯವಾದಿ ಲತಾಕುಮಾರಿ ಅವರು ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಆಗುವ ಶೋಷಣೆಯನ್ನು ತಪ್ಪಿಸಲು ಮತ್ತು ಭಯವನ್ನು ಹೋಗಲಾಡಿಸಲು ಕಾನೂನಿನ ಅರಿವು ಹೊಂದಿರಬೇಕು. ಹಲವು ದೌರ್ಜನ್ಯವನ್ನು ತಪ್ಪಿಸಲು ಇಂದಿನ ದಿನಗಳಲ್ಲಿ ಹೊಸ ಹೊಸ ಕಾನೂನನ್ನು ಜಾರಿಗೆ ತರಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ 14ನೇ ವಿಧಿಯಲ್ಲಿ ಬರುವ ಸಮಾನತೆಯ ಬಗ್ಗೆ ತಿಳಿಸಿದರು.

NRLMನ ಮೇರಿ ಎಸ್‌   ಅವರು  ಸಂಜೀವಿನಿ ಒಕ್ಕೂಟದ ಮೂಲಕ ಯೋಜನೆ ಸದುಪಯೋಗಪಡಿಸಿಕೊಳ್ಳಬಹುದು ಎಂದರು.”ರಾಷ್ಟೀಯ ಕೃಷಿ ವಿಕಾಸ ಯೋಜನೆ”  ಬಗ್ಗೆ ಡಾ. ಅಶ್ವತಿ ,ತಾಳೆ ಕೃಷಿಯ ಬಗ್ಗೆ ಆಲೆಟ್ಟಿ ಗ್ರಾಮದ ಪ್ರಗತಿಪರ ಕೃಷಿಕರಾದ  ಅಶೋಕ್ ಪ್ರಭು , ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ, ಕಾನೂನು ಬಗ್ಗೆ ದೀಪಿಕಾ ಪಿ, ಮಹಿಳಾ ಸಬಲೀಕರಣದ ಬಗ್ಗೆ ಅನುಷ್ಯ ,ಸ್ವಸಹಾಯ ಸಂಘಗಳ ಬಗ್ಗೆ  ಅವಿನಾಶ್ ಡೆಲ್ಲಾರಿಯೋ, ಬ್ಯಾಂಕ್ ನಿಂದ ಸಿಗಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಸುಜಾತ ಮಾಹಿತಿ ನೀಡಿದರು.

ಶಿಲ್ಪಾ ಸನತ್ ಅಧ್ಯಕ್ಷರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ, ತಾಳೆ ಬೆಳೆ ಕೃಷಿ 3F ಆಯಿಲ್ ಕಂಪನಿಯ ಕ್ಲಸ್ಟರ್ ಸೂಪರ್ ವೈಸರ್ ಸುಳ್ಯ ವಲಯ ಶ್ರೀ ರವಿಶಂಕರ್,  ಪುಷ್ಪಲತಾ ಕೆ ಆರ್ PHC ಅರಂತೋಡು,  ಚಿತ್ರ ಐ CHO ಗೂನಡ್ಕ,  ಹರ್ಷಿತ CHO ಗೂನಡ್ಕ, ಗ್ರಾಮ ಪಂಚಾಯತ್ ನ ಗೌರವಾನ್ವಿತ ಸದಸ್ಯರುಗಳಾದ  ಲೆಸ್ಸಿ ಮೊನಾಲಿಸಾ,  ಜಗದೀಶ್ ರೈ,  ರಜನಿ ಶರತ್, ಸುಶೀಲಾ ಪಿ, ಮಾಜಿ ಅಧ್ಯಕ್ಷರಾದ  ಯಮನ ಬಿ ಎಸ್, ಸುಂದರಿ ಮುಂಡಡ್ಕ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು, ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದು ಮಾಹಿತಿಯನ್ನು ಪಡೆದುಕೊಂಡರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ  ಸರಿತಾ ಓಲ್ಗಾ ಡಿ’ಸೋಜಾ ಎಲ್ಲರನ್ನೂ ಸ್ವಾಗತಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಕಾರ್ಯಕ್ರಮ ನಿರೂಪಿಸಿದರು.  ಗ್ರಾಮ ಪಂಚಾಯತ್ ಸದಸ್ಯರಾದ ರಜನಿ ಶರತ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

3 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

3 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

19 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

19 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

19 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

20 hours ago