Advertisement
ಸುದ್ದಿಗಳು

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

Share

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಭೆಯಲ್ಲಿ “ಮಹಿಳೆ ಮತ್ತು ಕಾನೂನು”  ಬಗ್ಗೆ ನ್ಯಾಯವಾದಿ ಲತಾಕುಮಾರಿ ಅವರು ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಆಗುವ ಶೋಷಣೆಯನ್ನು ತಪ್ಪಿಸಲು ಮತ್ತು ಭಯವನ್ನು ಹೋಗಲಾಡಿಸಲು ಕಾನೂನಿನ ಅರಿವು ಹೊಂದಿರಬೇಕು. ಹಲವು ದೌರ್ಜನ್ಯವನ್ನು ತಪ್ಪಿಸಲು ಇಂದಿನ ದಿನಗಳಲ್ಲಿ ಹೊಸ ಹೊಸ ಕಾನೂನನ್ನು ಜಾರಿಗೆ ತರಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ 14ನೇ ವಿಧಿಯಲ್ಲಿ ಬರುವ ಸಮಾನತೆಯ ಬಗ್ಗೆ ತಿಳಿಸಿದರು.

NRLMನ ಮೇರಿ ಎಸ್‌   ಅವರು  ಸಂಜೀವಿನಿ ಒಕ್ಕೂಟದ ಮೂಲಕ ಯೋಜನೆ ಸದುಪಯೋಗಪಡಿಸಿಕೊಳ್ಳಬಹುದು ಎಂದರು.”ರಾಷ್ಟೀಯ ಕೃಷಿ ವಿಕಾಸ ಯೋಜನೆ”  ಬಗ್ಗೆ ಡಾ. ಅಶ್ವತಿ ,ತಾಳೆ ಕೃಷಿಯ ಬಗ್ಗೆ ಆಲೆಟ್ಟಿ ಗ್ರಾಮದ ಪ್ರಗತಿಪರ ಕೃಷಿಕರಾದ  ಅಶೋಕ್ ಪ್ರಭು , ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ, ಕಾನೂನು ಬಗ್ಗೆ ದೀಪಿಕಾ ಪಿ, ಮಹಿಳಾ ಸಬಲೀಕರಣದ ಬಗ್ಗೆ ಅನುಷ್ಯ ,ಸ್ವಸಹಾಯ ಸಂಘಗಳ ಬಗ್ಗೆ  ಅವಿನಾಶ್ ಡೆಲ್ಲಾರಿಯೋ, ಬ್ಯಾಂಕ್ ನಿಂದ ಸಿಗಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಸುಜಾತ ಮಾಹಿತಿ ನೀಡಿದರು.

ಶಿಲ್ಪಾ ಸನತ್ ಅಧ್ಯಕ್ಷರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ, ತಾಳೆ ಬೆಳೆ ಕೃಷಿ 3F ಆಯಿಲ್ ಕಂಪನಿಯ ಕ್ಲಸ್ಟರ್ ಸೂಪರ್ ವೈಸರ್ ಸುಳ್ಯ ವಲಯ ಶ್ರೀ ರವಿಶಂಕರ್,  ಪುಷ್ಪಲತಾ ಕೆ ಆರ್ PHC ಅರಂತೋಡು,  ಚಿತ್ರ ಐ CHO ಗೂನಡ್ಕ,  ಹರ್ಷಿತ CHO ಗೂನಡ್ಕ, ಗ್ರಾಮ ಪಂಚಾಯತ್ ನ ಗೌರವಾನ್ವಿತ ಸದಸ್ಯರುಗಳಾದ  ಲೆಸ್ಸಿ ಮೊನಾಲಿಸಾ,  ಜಗದೀಶ್ ರೈ,  ರಜನಿ ಶರತ್, ಸುಶೀಲಾ ಪಿ, ಮಾಜಿ ಅಧ್ಯಕ್ಷರಾದ  ಯಮನ ಬಿ ಎಸ್, ಸುಂದರಿ ಮುಂಡಡ್ಕ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು, ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದು ಮಾಹಿತಿಯನ್ನು ಪಡೆದುಕೊಂಡರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ  ಸರಿತಾ ಓಲ್ಗಾ ಡಿ’ಸೋಜಾ ಎಲ್ಲರನ್ನೂ ಸ್ವಾಗತಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಕಾರ್ಯಕ್ರಮ ನಿರೂಪಿಸಿದರು.  ಗ್ರಾಮ ಪಂಚಾಯತ್ ಸದಸ್ಯರಾದ ರಜನಿ ಶರತ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

2 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

13 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

17 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

21 hours ago