ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಈ ಸಭೆಯಲ್ಲಿ “ಮಹಿಳೆ ಮತ್ತು ಕಾನೂನು” ಬಗ್ಗೆ ನ್ಯಾಯವಾದಿ ಲತಾಕುಮಾರಿ ಅವರು ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಆಗುವ ಶೋಷಣೆಯನ್ನು ತಪ್ಪಿಸಲು ಮತ್ತು ಭಯವನ್ನು ಹೋಗಲಾಡಿಸಲು ಕಾನೂನಿನ ಅರಿವು ಹೊಂದಿರಬೇಕು. ಹಲವು ದೌರ್ಜನ್ಯವನ್ನು ತಪ್ಪಿಸಲು ಇಂದಿನ ದಿನಗಳಲ್ಲಿ ಹೊಸ ಹೊಸ ಕಾನೂನನ್ನು ಜಾರಿಗೆ ತರಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ 14ನೇ ವಿಧಿಯಲ್ಲಿ ಬರುವ ಸಮಾನತೆಯ ಬಗ್ಗೆ ತಿಳಿಸಿದರು.
NRLMನ ಮೇರಿ ಎಸ್ ಅವರು ಸಂಜೀವಿನಿ ಒಕ್ಕೂಟದ ಮೂಲಕ ಯೋಜನೆ ಸದುಪಯೋಗಪಡಿಸಿಕೊಳ್ಳಬಹುದು ಎಂದರು.”ರಾಷ್ಟೀಯ ಕೃಷಿ ವಿಕಾಸ ಯೋಜನೆ” ಬಗ್ಗೆ ಡಾ. ಅಶ್ವತಿ ,ತಾಳೆ ಕೃಷಿಯ ಬಗ್ಗೆ ಆಲೆಟ್ಟಿ ಗ್ರಾಮದ ಪ್ರಗತಿಪರ ಕೃಷಿಕರಾದ ಅಶೋಕ್ ಪ್ರಭು , ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ, ಕಾನೂನು ಬಗ್ಗೆ ದೀಪಿಕಾ ಪಿ, ಮಹಿಳಾ ಸಬಲೀಕರಣದ ಬಗ್ಗೆ ಅನುಷ್ಯ ,ಸ್ವಸಹಾಯ ಸಂಘಗಳ ಬಗ್ಗೆ ಅವಿನಾಶ್ ಡೆಲ್ಲಾರಿಯೋ, ಬ್ಯಾಂಕ್ ನಿಂದ ಸಿಗಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಸುಜಾತ ಮಾಹಿತಿ ನೀಡಿದರು.
ಶಿಲ್ಪಾ ಸನತ್ ಅಧ್ಯಕ್ಷರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ, ತಾಳೆ ಬೆಳೆ ಕೃಷಿ 3F ಆಯಿಲ್ ಕಂಪನಿಯ ಕ್ಲಸ್ಟರ್ ಸೂಪರ್ ವೈಸರ್ ಸುಳ್ಯ ವಲಯ ಶ್ರೀ ರವಿಶಂಕರ್, ಪುಷ್ಪಲತಾ ಕೆ ಆರ್ PHC ಅರಂತೋಡು, ಚಿತ್ರ ಐ CHO ಗೂನಡ್ಕ, ಹರ್ಷಿತ CHO ಗೂನಡ್ಕ, ಗ್ರಾಮ ಪಂಚಾಯತ್ ನ ಗೌರವಾನ್ವಿತ ಸದಸ್ಯರುಗಳಾದ ಲೆಸ್ಸಿ ಮೊನಾಲಿಸಾ, ಜಗದೀಶ್ ರೈ, ರಜನಿ ಶರತ್, ಸುಶೀಲಾ ಪಿ, ಮಾಜಿ ಅಧ್ಯಕ್ಷರಾದ ಯಮನ ಬಿ ಎಸ್, ಸುಂದರಿ ಮುಂಡಡ್ಕ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು, ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದು ಮಾಹಿತಿಯನ್ನು ಪಡೆದುಕೊಂಡರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸರಿತಾ ಓಲ್ಗಾ ಡಿ’ಸೋಜಾ ಎಲ್ಲರನ್ನೂ ಸ್ವಾಗತಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ರಜನಿ ಶರತ್ ವಂದಿಸಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…