Advertisement
ಸುದ್ದಿಗಳು

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

Share

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಭೆಯಲ್ಲಿ “ಮಹಿಳೆ ಮತ್ತು ಕಾನೂನು”  ಬಗ್ಗೆ ನ್ಯಾಯವಾದಿ ಲತಾಕುಮಾರಿ ಅವರು ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಆಗುವ ಶೋಷಣೆಯನ್ನು ತಪ್ಪಿಸಲು ಮತ್ತು ಭಯವನ್ನು ಹೋಗಲಾಡಿಸಲು ಕಾನೂನಿನ ಅರಿವು ಹೊಂದಿರಬೇಕು. ಹಲವು ದೌರ್ಜನ್ಯವನ್ನು ತಪ್ಪಿಸಲು ಇಂದಿನ ದಿನಗಳಲ್ಲಿ ಹೊಸ ಹೊಸ ಕಾನೂನನ್ನು ಜಾರಿಗೆ ತರಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ 14ನೇ ವಿಧಿಯಲ್ಲಿ ಬರುವ ಸಮಾನತೆಯ ಬಗ್ಗೆ ತಿಳಿಸಿದರು.

Advertisement

NRLMನ ಮೇರಿ ಎಸ್‌   ಅವರು  ಸಂಜೀವಿನಿ ಒಕ್ಕೂಟದ ಮೂಲಕ ಯೋಜನೆ ಸದುಪಯೋಗಪಡಿಸಿಕೊಳ್ಳಬಹುದು ಎಂದರು.”ರಾಷ್ಟೀಯ ಕೃಷಿ ವಿಕಾಸ ಯೋಜನೆ”  ಬಗ್ಗೆ ಡಾ. ಅಶ್ವತಿ ,ತಾಳೆ ಕೃಷಿಯ ಬಗ್ಗೆ ಆಲೆಟ್ಟಿ ಗ್ರಾಮದ ಪ್ರಗತಿಪರ ಕೃಷಿಕರಾದ  ಅಶೋಕ್ ಪ್ರಭು , ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ, ಕಾನೂನು ಬಗ್ಗೆ ದೀಪಿಕಾ ಪಿ, ಮಹಿಳಾ ಸಬಲೀಕರಣದ ಬಗ್ಗೆ ಅನುಷ್ಯ ,ಸ್ವಸಹಾಯ ಸಂಘಗಳ ಬಗ್ಗೆ  ಅವಿನಾಶ್ ಡೆಲ್ಲಾರಿಯೋ, ಬ್ಯಾಂಕ್ ನಿಂದ ಸಿಗಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಸುಜಾತ ಮಾಹಿತಿ ನೀಡಿದರು.

ಶಿಲ್ಪಾ ಸನತ್ ಅಧ್ಯಕ್ಷರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ, ತಾಳೆ ಬೆಳೆ ಕೃಷಿ 3F ಆಯಿಲ್ ಕಂಪನಿಯ ಕ್ಲಸ್ಟರ್ ಸೂಪರ್ ವೈಸರ್ ಸುಳ್ಯ ವಲಯ ಶ್ರೀ ರವಿಶಂಕರ್,  ಪುಷ್ಪಲತಾ ಕೆ ಆರ್ PHC ಅರಂತೋಡು,  ಚಿತ್ರ ಐ CHO ಗೂನಡ್ಕ,  ಹರ್ಷಿತ CHO ಗೂನಡ್ಕ, ಗ್ರಾಮ ಪಂಚಾಯತ್ ನ ಗೌರವಾನ್ವಿತ ಸದಸ್ಯರುಗಳಾದ  ಲೆಸ್ಸಿ ಮೊನಾಲಿಸಾ,  ಜಗದೀಶ್ ರೈ,  ರಜನಿ ಶರತ್, ಸುಶೀಲಾ ಪಿ, ಮಾಜಿ ಅಧ್ಯಕ್ಷರಾದ  ಯಮನ ಬಿ ಎಸ್, ಸುಂದರಿ ಮುಂಡಡ್ಕ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು, ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದು ಮಾಹಿತಿಯನ್ನು ಪಡೆದುಕೊಂಡರು.

Advertisement

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ  ಸರಿತಾ ಓಲ್ಗಾ ಡಿ’ಸೋಜಾ ಎಲ್ಲರನ್ನೂ ಸ್ವಾಗತಿಸಿದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಕಾರ್ಯಕ್ರಮ ನಿರೂಪಿಸಿದರು.  ಗ್ರಾಮ ಪಂಚಾಯತ್ ಸದಸ್ಯರಾದ ರಜನಿ ಶರತ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

12 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

14 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

21 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago