ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

February 12, 2026
6:54 AM
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್ ಮೆಕ್ಕೆಜೋಳ ಮಾರಾಟ ಮಾಡಿ ಲಾಭ ಪಡೆದಿದ್ದಾರೆ.

ದಾವಣಗೆರೆ ಜಿಲ್ಲೆಯ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಎಂ ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಈ ಯೋಜನೆಯಡಿ ರೈತರಿಗೆ ನೇರ ಲಾಭವಾಗಿದ್ದು. 3,412 ರೈತರು ನೋಂದಣಿ ಮಾಡಿಕೊಂಡಿದ್ದು,  87,258 ಕ್ವಿಂಟಲ್ ಮೆಕ್ಕೆಜೋಳ ಮಾರಾಟ ಮಾಡಿದ್ದಾರೆ. ಪಿ.ಡಿ.ಪಿ.ಎಸ್ (Price Deficiency Payment Scheme) ಯೋಜನೆಯ ಲಾಭ ಪಡೆದಿದ್ದಾರೆ. ಜಿಲ್ಲೆಯ ವಿವಿಧ ಮಾರುಕಟ್ಟೆಗಳಲ್ಲಿ ಮಾರಾಟ ನಡೆಸಿ ರೈತರು ಯೋಜನೆಯಡಿ ಬೆಲೆ ರಕ್ಷಣೆಯ ಲಾಭ ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕುಕ್ಕುಟ ಆಹಾರ ಘಟಕಗಳಿಗೆ ಸರಬರಾಜು ಮಾಡಲಾಗಿದ್ದು, ಜಿಲ್ಲೆಯ ವಿವಿಧ ಕುಕ್ಕುಟ ಆಹಾರ ಉತ್ಪಾದಕ ಘಟಕಗಳಿಗೆ 91 ರೈತರಿಂದ 2,712 ಕ್ವಿಂಟಲ್ ಮೆಕ್ಕೆಜೋಳ ಮಾರಾಟವಾಗಿದ್ದು  ಪ್ರತಿ ಕ್ವಿಂಟಲ್‌ಗೆ ₹2,400 ದರದಲ್ಲಿ ಖರೀದಿ ಮಾಡಲಾಗಿದೆ. ಇದರಿಂದ ರೈತರಿಗೆ ಉತ್ತಮ ಮಾರುಕಟ್ಟೆ ಸಂಪರ್ಕ ಲಭಿಸಿದೆ ಎಂದು ವಿವರಿಸಿದರು. ಕೆಎಂಎಫ್ ಕೂಡಾ ಖರೀದಿ ಮಾಡಿದ್ದು, 917 ರೈತರಿಂದ 21,706 ಕ್ವಿಂಟಲ್ ಮೆಕ್ಕೆಜೋಳ ಖರೀದಿಯಾಗಿದ್ದುಹಾಲು ಉತ್ಪಾದನಾ ವಲಯಕ್ಕೆ ಆಹಾರ ಪೂರೈಕೆಯಾಗಿ ಮೆಕ್ಕೆಜೋಳದ ಬೇಡಿಕೆ ಹೆಚ್ಚುತ್ತಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯ ಪರಿಣಾಮ :  ಮಾರುಕಟ್ಟೆ ಮಧ್ಯಪ್ರವೇಶ ಮತ್ತು ಪಿಡಿಪಿಎಸ್ ಯೋಜನೆಗಳ ಮೂಲಕ ರೈತರಿಗೆ ಬೆಲೆ ಭದ್ರತೆ ದೊರಕುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ಬೆಳೆ ಬೆಲೆ ಕುಸಿತದಿಂದ ರಕ್ಷಣೆ ಸಿಗುತ್ತಿದೆ.  ಜಿಲ್ಲಾಧಿಕಾರಿಗಳ ಪ್ರಕಾರ, ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರು ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror