ದಾವಣಗೆರೆ ಜಿಲ್ಲೆಯ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಎಂ ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಈ ಯೋಜನೆಯಡಿ ರೈತರಿಗೆ ನೇರ ಲಾಭವಾಗಿದ್ದು. 3,412 ರೈತರು ನೋಂದಣಿ ಮಾಡಿಕೊಂಡಿದ್ದು, 87,258 ಕ್ವಿಂಟಲ್ ಮೆಕ್ಕೆಜೋಳ ಮಾರಾಟ ಮಾಡಿದ್ದಾರೆ. ಪಿ.ಡಿ.ಪಿ.ಎಸ್ (Price Deficiency Payment Scheme) ಯೋಜನೆಯ ಲಾಭ ಪಡೆದಿದ್ದಾರೆ. ಜಿಲ್ಲೆಯ ವಿವಿಧ ಮಾರುಕಟ್ಟೆಗಳಲ್ಲಿ ಮಾರಾಟ ನಡೆಸಿ ರೈತರು ಯೋಜನೆಯಡಿ ಬೆಲೆ ರಕ್ಷಣೆಯ ಲಾಭ ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕುಕ್ಕುಟ ಆಹಾರ ಘಟಕಗಳಿಗೆ ಸರಬರಾಜು ಮಾಡಲಾಗಿದ್ದು, ಜಿಲ್ಲೆಯ ವಿವಿಧ ಕುಕ್ಕುಟ ಆಹಾರ ಉತ್ಪಾದಕ ಘಟಕಗಳಿಗೆ 91 ರೈತರಿಂದ 2,712 ಕ್ವಿಂಟಲ್ ಮೆಕ್ಕೆಜೋಳ ಮಾರಾಟವಾಗಿದ್ದು ಪ್ರತಿ ಕ್ವಿಂಟಲ್ಗೆ ₹2,400 ದರದಲ್ಲಿ ಖರೀದಿ ಮಾಡಲಾಗಿದೆ. ಇದರಿಂದ ರೈತರಿಗೆ ಉತ್ತಮ ಮಾರುಕಟ್ಟೆ ಸಂಪರ್ಕ ಲಭಿಸಿದೆ ಎಂದು ವಿವರಿಸಿದರು. ಕೆಎಂಎಫ್ ಕೂಡಾ ಖರೀದಿ ಮಾಡಿದ್ದು, 917 ರೈತರಿಂದ 21,706 ಕ್ವಿಂಟಲ್ ಮೆಕ್ಕೆಜೋಳ ಖರೀದಿಯಾಗಿದ್ದುಹಾಲು ಉತ್ಪಾದನಾ ವಲಯಕ್ಕೆ ಆಹಾರ ಪೂರೈಕೆಯಾಗಿ ಮೆಕ್ಕೆಜೋಳದ ಬೇಡಿಕೆ ಹೆಚ್ಚುತ್ತಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯ ಪರಿಣಾಮ : ಮಾರುಕಟ್ಟೆ ಮಧ್ಯಪ್ರವೇಶ ಮತ್ತು ಪಿಡಿಪಿಎಸ್ ಯೋಜನೆಗಳ ಮೂಲಕ ರೈತರಿಗೆ ಬೆಲೆ ಭದ್ರತೆ ದೊರಕುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ಬೆಳೆ ಬೆಲೆ ಕುಸಿತದಿಂದ ರಕ್ಷಣೆ ಸಿಗುತ್ತಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರು ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…