Advertisement
MIRROR FOCUS

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

Share

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ದೇಶದ ಆರ್ಥಿಕತೆಯಲ್ಲಿ ಇವುಗಳ ಕೊಡುಗೆ ಅತಿ ದೊಡ್ಡದು ಎಂದು ಸಹಕಾರ ಖಾತೆ ಸಚಿವ ಅಮಿತ್ ಶಾ ಹೇಳಿದರು.

ಅವರು ಅಂತಾರಾಷ್ಟ್ರೀಯ  ಸಹಕಾರಿ ವರ್ಷದ ಅಂಗವಾಗಿ  ಮಧ್ಯಪ್ರದೇಶ ಭೋಪಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಮ್ಮೇಳನಕ್ಕೆ   ಚಾಲನೆ ನೀಡಿ ಮಾತನಾಡಿದರು. ಸಹಕಾರ ಮಂತ್ರಾಲಯದ ಅಡಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಬಜೆಟ್‌ನಲ್ಲಿ ಕೂಡ ಅತಿ ದೊಡ್ಡ ಮೊತ್ತ ಮೀಸಲು ಇರಿಸಲಾಗಿದೆ ಎಂದು ಹೇಳಿದರು. ಪರಸ್ಪರ ಸಹಕಾರ, ನಂಬಿಕೆಯ ಅಮೂಲ್ಯ ತತ್ವಗಳ ಬುನಾದಿಯ ಮೇಲೆ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ.  ಪ್ರಾಥಮಿಕ ಕೃಷಿ ಮತ್ತು ಸಹಕಾರಿ ಸಂಘಗಳನ್ನು ಗಣಕೀಕರಣ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸುವ ಮೂಲಕ ಈ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಾಗುತ್ತಿದೆ. ಸಹಕಾರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಈ ಕ್ಷೇತ್ರಕ್ಕೆ ಇನ್ನಷ್ಟು ಉತ್ತೇಜನ ನೀಡಲಾಗುತ್ತಿದೆ ಎಂದರು.  ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಹೈನುಗಾರಿಕೆಯಲ್ಲಿಯೂ ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳತ್ತಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago