ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ದೇಶದ ಆರ್ಥಿಕತೆಯಲ್ಲಿ ಇವುಗಳ ಕೊಡುಗೆ ಅತಿ ದೊಡ್ಡದು ಎಂದು ಸಹಕಾರ ಖಾತೆ ಸಚಿವ ಅಮಿತ್ ಶಾ ಹೇಳಿದರು.
ಅವರು ಅಂತಾರಾಷ್ಟ್ರೀಯ ಸಹಕಾರಿ ವರ್ಷದ ಅಂಗವಾಗಿ ಮಧ್ಯಪ್ರದೇಶ ಭೋಪಾಲ್ನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರಿ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. ಸಹಕಾರ ಮಂತ್ರಾಲಯದ ಅಡಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಬಜೆಟ್ನಲ್ಲಿ ಕೂಡ ಅತಿ ದೊಡ್ಡ ಮೊತ್ತ ಮೀಸಲು ಇರಿಸಲಾಗಿದೆ ಎಂದು ಹೇಳಿದರು. ಪರಸ್ಪರ ಸಹಕಾರ, ನಂಬಿಕೆಯ ಅಮೂಲ್ಯ ತತ್ವಗಳ ಬುನಾದಿಯ ಮೇಲೆ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಪ್ರಾಥಮಿಕ ಕೃಷಿ ಮತ್ತು ಸಹಕಾರಿ ಸಂಘಗಳನ್ನು ಗಣಕೀಕರಣ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸುವ ಮೂಲಕ ಈ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಾಗುತ್ತಿದೆ. ಸಹಕಾರಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಈ ಕ್ಷೇತ್ರಕ್ಕೆ ಇನ್ನಷ್ಟು ಉತ್ತೇಜನ ನೀಡಲಾಗುತ್ತಿದೆ ಎಂದರು. ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಹೈನುಗಾರಿಕೆಯಲ್ಲಿಯೂ ಉದ್ಯೋಗ ಸೃಷ್ಟಿಯಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳತ್ತಿದೆ ಎಂದು ತಿಳಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…