ಅನುಕ್ರಮ

ಪರಿವರ್ತನೆಯ ಕಾಲ ಇದು ಸಂಕ್ರಮಣ | ಸಂಕ್ರಾಂತಿಯ ಶುಭಾಶಯಗಳು.

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ?

Advertisement

ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು‌ ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು. ಸಂಕ್ರಾಂತಿಯ ವಿಶೇಷ ಎಳ್ಳು, ಬೆಲ್ಲ . ಆರೋಗ್ಯದ ದೃಷ್ಟಿಯಿಂದ ಎಳ್ಳು , ಬೆಲ್ಲ ಬಹಳಷ್ಟು ಒಳ್ಳೆಯದು. ಹಾಗಾಗಿ ಸಂಕ್ರಾಂತಿಯೊಂದು ಕಾರಣ.

ಇನ್ನು ಹೊಸ ಕ್ಯಾಲೆಂಡರ್ ವರ್ಷದ ಮೊದಲ ಸಂಭ್ರಮ .

ಈ ಸಂಕ್ರಾಂತಿ ರೈತರ ಹಬ್ಬವೆಂದೇ ಪ್ರತೀತಿ. ಬೇಸಾಯ ಮುಗಿದು ಬೆಳೆ ಕೈ ಸೇರಿದ ಸಮಯದಲ್ಲಿಯೇ ಸಂಕ್ರಾಂತಿ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಸಂಧರ್ಭವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.

ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು.ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಹಬ್ಬದ ಘಮ್ಮತ್ತು. ಪೊಂಗಲ್ ಸಂಕ್ರಾಂತಿ ಯ ವಿಶೇಷ ಖಾದ್ಯ. ಹೆಸರುಬೇಳೆ, ಅಕ್ಕಿ, ಬೆಲ್ಲ, ತೆಂಗಿನತುರಿ, ಗೇರುಬೀಜ, ತುಪ್ಪ ಹಾಲು ಬಳಸಿ ಮಾಡುವ ಈ ಖಾದ್ಯ ಬಹಳ ರುಚಿಯಾಗಿರುತ್ತದೆ. ಬನ್ನಿ ಸಂಕ್ರಾಂತಿಯನ್ನು ಪೊಂಗಲ್ ಸವಿದು ಆಚರಿಸೋಣ. ಸಂಕ್ರಾಂತಿ ಎಲ್ಲರಿಗೂ ಒಳ್ಳಯದನ್ನೇ ಮಾಡಲಿ. ಸಂಕ್ರಾಂತಿಯ ಶುಭಾಶಯಗಳು.

Advertisement

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

9 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

10 hours ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

10 hours ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

10 hours ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

10 hours ago