Advertisement
ಅನುಕ್ರಮ

ಪರಿವರ್ತನೆಯ ಕಾಲ ಇದು ಸಂಕ್ರಮಣ | ಸಂಕ್ರಾಂತಿಯ ಶುಭಾಶಯಗಳು.

Share

ಹಬ್ಬಗಳು ಟಾನಿಕ್ ನಂತೆ.! ಒಪ್ಪುತ್ತೀರಲ್ವಾ?

Advertisement

ದಿನನಿತ್ಯದ ಜಂಜಡಗಳಿಂದ ಒಂದು ಪುಟ್ಟ ಬದಲಾವಣೆ ಈ ಹಬ್ಬಗಳು. ಪೂಜೆಯ ನೆಪದಲ್ಲಿ ಒಂದಷ್ಟು‌ ಸಿಹಿ. ಸಂಪ್ರದಾಯದ ಹೆಸರಲ್ಲಿ ಎಣ್ಣೆ ಸ್ನಾನ ದೇಹಕ್ಕೂ ಉಲ್ಲಾಸ ಮನಸಿಗೂ ಖುಷಿ. ಸದ್ಯ ಯಾವ ಹಬ್ಬಗಳೂ ಒಂದೇ ಪ್ರದೇಶಕ್ಕೆ ಸೀಮಿತವಾಗಿಲ್ಲ. ದೇಶ ,ಭಾಷೆ , ಪ್ರಾಂತ್ಯ ಮೀರಿ ಆಚರಿಸಲ್ಪಡುತ್ತವೆ. ಇಂದು ಸಂಭ್ರಮಕ್ಕೊಂದು ಕಾರಣ ಹಬ್ಬಗಳು. ಸಂಕ್ರಾಂತಿಯ ವಿಶೇಷ ಎಳ್ಳು, ಬೆಲ್ಲ . ಆರೋಗ್ಯದ ದೃಷ್ಟಿಯಿಂದ ಎಳ್ಳು , ಬೆಲ್ಲ ಬಹಳಷ್ಟು ಒಳ್ಳೆಯದು. ಹಾಗಾಗಿ ಸಂಕ್ರಾಂತಿಯೊಂದು ಕಾರಣ.

ಇನ್ನು ಹೊಸ ಕ್ಯಾಲೆಂಡರ್ ವರ್ಷದ ಮೊದಲ ಸಂಭ್ರಮ .

ಈ ಸಂಕ್ರಾಂತಿ ರೈತರ ಹಬ್ಬವೆಂದೇ ಪ್ರತೀತಿ. ಬೇಸಾಯ ಮುಗಿದು ಬೆಳೆ ಕೈ ಸೇರಿದ ಸಮಯದಲ್ಲಿಯೇ ಸಂಕ್ರಾಂತಿ ಬರುವುದರಿಂದ ಭೂಮಿ ತಾಯಿಗೆ ಕೃತಜ್ಞತೆ ಹೇಳುವ ಸಂಧರ್ಭವೂ ಇದಾಗಿದೆ. ಕೃಷಿ ಕೈಂಕರ್ಯದಲ್ಲಿ ಜೊತೆಯಾದ ಜಾನುವಾರುಗಳನ್ನು ಸ್ನಾನ ಮಾಡಿಸಿ , ಸಿಂಗರಿಸಿ ಪೂಜಿಸುವ ಸಂಪ್ರದಾಯವಿದೆ.

ದೇಶದೆಲ್ಲೆಡೆ ಬೇರೆ ಬೇರೆ ರೀತಿಯಲ್ಲಿ, ವಿವಿಧ ಹೆಸರುಗಳಿಂದ ಆಚರಿಸ್ಪಡುತ್ತವೆ. ಬೇರೆ ಬೇರೆ ಪ್ರದೇಶಗಳಲ್ಲಿ ಹಲವು ರೀತಿಯಲ್ಲಿ ಆಚರಿಸಲ್ಪಡುತ್ತವೆ. ಆಯಾ ಪ್ರಾದೇಶಿಕ ಸಂಪ್ರದಾಯಕ್ಕೆ ಹೆಚ್ಚು ಒತ್ತು ಈ ಹಬ್ಬದಲ್ಲಿ ಕಾಣಬಹುದು. ಆದರೆ ಪ್ರಕೃತಿಯ ಆರಾಧನೆಯೇ ಇಲ್ಲಿ ಎದ್ದು ಕಾಣುವುದು.ಮನೆಯವರು ಊರವರು ಎಲ್ಲರೂ ಸೇರಿ ಒಟ್ಟಾಗಿ ಆಚರಿಸಿ ಸಂಭ್ರಮಿಸುವುದೇ ಹಬ್ಬದ ಘಮ್ಮತ್ತು. ಪೊಂಗಲ್ ಸಂಕ್ರಾಂತಿ ಯ ವಿಶೇಷ ಖಾದ್ಯ. ಹೆಸರುಬೇಳೆ, ಅಕ್ಕಿ, ಬೆಲ್ಲ, ತೆಂಗಿನತುರಿ, ಗೇರುಬೀಜ, ತುಪ್ಪ ಹಾಲು ಬಳಸಿ ಮಾಡುವ ಈ ಖಾದ್ಯ ಬಹಳ ರುಚಿಯಾಗಿರುತ್ತದೆ. ಬನ್ನಿ ಸಂಕ್ರಾಂತಿಯನ್ನು ಪೊಂಗಲ್ ಸವಿದು ಆಚರಿಸೋಣ. ಸಂಕ್ರಾಂತಿ ಎಲ್ಲರಿಗೂ ಒಳ್ಳಯದನ್ನೇ ಮಾಡಲಿ. ಸಂಕ್ರಾಂತಿಯ ಶುಭಾಶಯಗಳು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

7 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

12 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

17 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

17 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

17 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago