ಸುದ್ದಿಗಳು

#MakeInIndia | `ಮೇಕ್ ಇನ್ ಇಂಡಿಯಾ’ | ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ | ರಷ್ಯಾ ಅಧ್ಯಕ್ಷ ಪುಟಿನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ ಯಾವುದೇ ವಸ್ತು ತೆಗೆದುಕೊಂಡ್ರು ಅದrಲ್ಲಿ ಮೇಡ್ ಇನ್ ಚೈನಾ ಅನ್ನೋದನ್ನೇ ಕಾಣುತ್ತಿದ್ದೆವು. ಆದರೆ ಈಗ ಹಾಗಲ್ಲ. ಕಾಲ ಬದಲಾಗಿದೆ. ಜನರೂ ಬದಲಾಗಿದ್ದಾರೆ. ಅದರಲ್ಲಿ ಒಂದು ಮೇಕ್ ಇನ್ ಇಂಡಿಯಾ. ಹೌದು ಬದಲಾದ ಕಾಲಮಾನದಲ್ಲಿ ನಮ್ಮ ದೇಶದ ಜನ ನಮ್ಮ ದೇಶದಲ್ಲೇ ತಯಾರಿಸಿದ ವಸ್ತುಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿಯವರ #Narendra Modi `ಮೇಕ್ ಇನ್ ಇಂಡಿಯಾ’ #MakeInIndia ಪರಿಕಲ್ಪನೆ ಭಾರತದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ರಷ್ಯಾ #Russia ಅಧ್ಯಕ್ಷ ವ್ಲಾಡಿಮಿರ್ ಪುಟಿನ್ #Vladimir Putin ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು, 2014ರಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಬಿತ್ತಿದ್ದರು. ಇದು ಭಾರತದ ಆರ್ಥಿಕತೆಯ ಮೇಲೆ ಯಶಸ್ವಿ ಪರಿಣಾಮವನ್ನು ಬೀರಿದೆ. ಭಾರತದ ಉತ್ತಮ ನಾಯಕ ಮತ್ತು ರಷ್ಯಾದ ಉತ್ತಮ ಸ್ನೇಹಿತ ನರೇಂದ್ರ ಮೋದಿಯವರಿಂದ ಇದು ಸಾಧ್ಯವಾಗಿದೆ ಎಂದು ಅವರು ಹೊಗಳಿದ್ದಾರೆ. ರಷ್ಯಾದಲ್ಲಿ ದೇಶೀಯ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಭಾರತದ ಈ ವಿಚಾರವನ್ನು ಅವರು ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್‌ ಇತ್ತೀಚೆಗೆ ಮಾತನಾಡಿ, ರಷ್ಯಾ ಮತ್ತು ಭಾರತದ ಪಾಲುದಾರಿಕೆ ವಿಶ್ವಕ್ಕೆ ಬಲವನ್ನು ತೋರಿಸಿದೆ. ಇದರಿಂದಾಗಿ ಜಗತ್ತಿನಲ್ಲಿ ಎರಡೂ ದೇಶಗಳು ಬಲವಾಗಿ ಬೆಳೆಯುತ್ತಿವೆ ಎಂದಿದ್ದರು. ಆದರೆ ರಷ್ಯಾದ ಬಗ್ಗೆ ಪ್ರತಿದಿನ ಜಾಗತಿಕ ಮಟ್ಟದಲ್ಲಿ ಸುಳ್ಳು ಸುದ್ದಿಗಳು ಹಬ್ಬುತ್ತಿವೆ. ಅಲ್ಲದೇ ರಷ್ಯಾ ಮತ್ತು ಭಾರತದ ಸಂಬಂಧವನ್ನು ಅಡ್ಡಿಪಡಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

1 hour ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

8 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

16 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

17 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

2 days ago