Advertisement
ಸುದ್ದಿಗಳು

ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ : ಜೀವನದ ಭಾಗವಾಗಿ ಸಿರಿಧಾನ್ಯ ಅಳವಡಿಸಿಕೊಳ್ಳಿ: ಪ್ರಧಾನಿ ನರೇಂದ್ರ ಮೋದಿ ಕರೆ

Share

ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ರಾಗಿ ವರ್ಷ 2023 ಎಂದು ಘೋಷಿಸಿದೆ. ಈ ನಿಟ್ಟಿನಲ್ಲಿ, ಅಂತರರಾಷ್ಟ್ರೀಯ ರಾಗಿ ವರ್ಷ 2023 ಅನ್ನು ಬೆಂಬಲಿಸಲು ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.  ಹಾಗೆ ಸಿರಿಧಾನ್ಯವನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ.  ಭಾರತದ ಉಪಕ್ರಮದಲ್ಲಿ ಜಗತ್ತು ಅಂತಾರಾಷ್ಟ್ರೀಯ ರಾಗಿ ವರ್ಷವನ್ನು ಆಚರಿಸುತ್ತಿದೆ.

Advertisement

ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ. ಅಂದರೆ ಸಿರಿ ಧಾನ್ಯ. ನಿಮ್ಮ ಶ್ರೀಅನ್ನ-ರಾಗಿ ಕರ್ನಾಟಕದ ಸಂಸ್ಕೃತಿಯ ಒಂದು ಭಾಗ, ಮತ್ತು ನಿಮ್ಮ ಸಾಮಾಜಿಕ ಅಸ್ಮಿತೆಯೂ ಹೌದು ಎಂದರು.

ಇಂದು ಇಡೀ ದೇಶವೇ ಕನ್ನಡಿಗರ ಹಾದಿಯಲ್ಲಿ ಸಾಗುತ್ತಿದ್ದು, ಸಿರಿಧಾನ್ಯಗಳನ್ನು ಶ್ರೀ ಅನ್ನ ಎಂದು ಕರೆಯಲು ಆರಂಭಿಸಿದೆ. ಇಂದು, ಇಡೀ ಜಗತ್ತು ಶ್ರೀಅನ್ನದ ಪ್ರಯೋಜನಗಳನ್ನು ಮತ್ತು ಅದರ ಅಗತ್ಯವನ್ನು ಅರ್ಥಮಾಡಿಕೊಳ್ಳುತ್ತಿರುವಾಗ, ಮುಂಬರುವ ದಿನಗಳಲ್ಲಿ ಅದರ ಬೇಡಿಕೆಯೂ ಹೆಚ್ಚಾಗಲಿದೆ. ಇದರಿಂದ ಕರ್ನಾಟಕದ ಜನತೆಗೆ, ಕರ್ನಾಟಕದ ಸಣ್ಣ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆ.

ವಾಸ್ತವವಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ರ ವಾರ್ಷಿಕ ಬಜೆಟ್‌ನ ಭಾಷಣದಲ್ಲಿ ಶ್ರೀ ಅನ್ನ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಶ್ರೀ ಅನ್ನ ಯೋಜನೆಯಿಂದ ಒರಟಾದ ಧಾನ್ಯಗಳಿಗೆ ಉತ್ತೇಜನ ದೊರೆಯುತ್ತದೆ. ದೇಶದಲ್ಲಿ ಸಿರಿಧಾನ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಅನ್ನ ಯೋಜನೆ ಪ್ರಾರಂಭಿಸಲಾಗುತ್ತಿದೆ.ಇದಕ್ಕಾಗಿ ಇಂಡಿಯನ್ ಮಿಲೆಟ್ಸ್ ಇನ್‌ಸ್ಟಿಟ್ಯೂಟ್ ಕೂಡ ರಚನೆಯಾಗಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

4 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

4 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

4 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

15 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago