ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ರಾಗಿ ವರ್ಷ 2023 ಎಂದು ಘೋಷಿಸಿದೆ. ಈ ನಿಟ್ಟಿನಲ್ಲಿ, ಅಂತರರಾಷ್ಟ್ರೀಯ ರಾಗಿ ವರ್ಷ 2023 ಅನ್ನು ಬೆಂಬಲಿಸಲು ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಾಗೆ ಸಿರಿಧಾನ್ಯವನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ. ಭಾರತದ ಉಪಕ್ರಮದಲ್ಲಿ ಜಗತ್ತು ಅಂತಾರಾಷ್ಟ್ರೀಯ ರಾಗಿ ವರ್ಷವನ್ನು ಆಚರಿಸುತ್ತಿದೆ.
ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ. ಅಂದರೆ ಸಿರಿ ಧಾನ್ಯ. ನಿಮ್ಮ ಶ್ರೀಅನ್ನ-ರಾಗಿ ಕರ್ನಾಟಕದ ಸಂಸ್ಕೃತಿಯ ಒಂದು ಭಾಗ, ಮತ್ತು ನಿಮ್ಮ ಸಾಮಾಜಿಕ ಅಸ್ಮಿತೆಯೂ ಹೌದು ಎಂದರು.
ಇಂದು ಇಡೀ ದೇಶವೇ ಕನ್ನಡಿಗರ ಹಾದಿಯಲ್ಲಿ ಸಾಗುತ್ತಿದ್ದು, ಸಿರಿಧಾನ್ಯಗಳನ್ನು ಶ್ರೀ ಅನ್ನ ಎಂದು ಕರೆಯಲು ಆರಂಭಿಸಿದೆ. ಇಂದು, ಇಡೀ ಜಗತ್ತು ಶ್ರೀಅನ್ನದ ಪ್ರಯೋಜನಗಳನ್ನು ಮತ್ತು ಅದರ ಅಗತ್ಯವನ್ನು ಅರ್ಥಮಾಡಿಕೊಳ್ಳುತ್ತಿರುವಾಗ, ಮುಂಬರುವ ದಿನಗಳಲ್ಲಿ ಅದರ ಬೇಡಿಕೆಯೂ ಹೆಚ್ಚಾಗಲಿದೆ. ಇದರಿಂದ ಕರ್ನಾಟಕದ ಜನತೆಗೆ, ಕರ್ನಾಟಕದ ಸಣ್ಣ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆ.
ವಾಸ್ತವವಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ರ ವಾರ್ಷಿಕ ಬಜೆಟ್ನ ಭಾಷಣದಲ್ಲಿ ಶ್ರೀ ಅನ್ನ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಶ್ರೀ ಅನ್ನ ಯೋಜನೆಯಿಂದ ಒರಟಾದ ಧಾನ್ಯಗಳಿಗೆ ಉತ್ತೇಜನ ದೊರೆಯುತ್ತದೆ. ದೇಶದಲ್ಲಿ ಸಿರಿಧಾನ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಅನ್ನ ಯೋಜನೆ ಪ್ರಾರಂಭಿಸಲಾಗುತ್ತಿದೆ.ಇದಕ್ಕಾಗಿ ಇಂಡಿಯನ್ ಮಿಲೆಟ್ಸ್ ಇನ್ಸ್ಟಿಟ್ಯೂಟ್ ಕೂಡ ರಚನೆಯಾಗಬೇಕು ಎಂದು ಹೇಳಿದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…