Advertisement
ಸುದ್ದಿಗಳು

ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ : ಜೀವನದ ಭಾಗವಾಗಿ ಸಿರಿಧಾನ್ಯ ಅಳವಡಿಸಿಕೊಳ್ಳಿ: ಪ್ರಧಾನಿ ನರೇಂದ್ರ ಮೋದಿ ಕರೆ

Share

ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ರಾಗಿ ವರ್ಷ 2023 ಎಂದು ಘೋಷಿಸಿದೆ. ಈ ನಿಟ್ಟಿನಲ್ಲಿ, ಅಂತರರಾಷ್ಟ್ರೀಯ ರಾಗಿ ವರ್ಷ 2023 ಅನ್ನು ಬೆಂಬಲಿಸಲು ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.  ಹಾಗೆ ಸಿರಿಧಾನ್ಯವನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ.  ಭಾರತದ ಉಪಕ್ರಮದಲ್ಲಿ ಜಗತ್ತು ಅಂತಾರಾಷ್ಟ್ರೀಯ ರಾಗಿ ವರ್ಷವನ್ನು ಆಚರಿಸುತ್ತಿದೆ.

ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ. ಅಂದರೆ ಸಿರಿ ಧಾನ್ಯ. ನಿಮ್ಮ ಶ್ರೀಅನ್ನ-ರಾಗಿ ಕರ್ನಾಟಕದ ಸಂಸ್ಕೃತಿಯ ಒಂದು ಭಾಗ, ಮತ್ತು ನಿಮ್ಮ ಸಾಮಾಜಿಕ ಅಸ್ಮಿತೆಯೂ ಹೌದು ಎಂದರು.

ಇಂದು ಇಡೀ ದೇಶವೇ ಕನ್ನಡಿಗರ ಹಾದಿಯಲ್ಲಿ ಸಾಗುತ್ತಿದ್ದು, ಸಿರಿಧಾನ್ಯಗಳನ್ನು ಶ್ರೀ ಅನ್ನ ಎಂದು ಕರೆಯಲು ಆರಂಭಿಸಿದೆ. ಇಂದು, ಇಡೀ ಜಗತ್ತು ಶ್ರೀಅನ್ನದ ಪ್ರಯೋಜನಗಳನ್ನು ಮತ್ತು ಅದರ ಅಗತ್ಯವನ್ನು ಅರ್ಥಮಾಡಿಕೊಳ್ಳುತ್ತಿರುವಾಗ, ಮುಂಬರುವ ದಿನಗಳಲ್ಲಿ ಅದರ ಬೇಡಿಕೆಯೂ ಹೆಚ್ಚಾಗಲಿದೆ. ಇದರಿಂದ ಕರ್ನಾಟಕದ ಜನತೆಗೆ, ಕರ್ನಾಟಕದ ಸಣ್ಣ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆ.

ವಾಸ್ತವವಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ರ ವಾರ್ಷಿಕ ಬಜೆಟ್‌ನ ಭಾಷಣದಲ್ಲಿ ಶ್ರೀ ಅನ್ನ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಶ್ರೀ ಅನ್ನ ಯೋಜನೆಯಿಂದ ಒರಟಾದ ಧಾನ್ಯಗಳಿಗೆ ಉತ್ತೇಜನ ದೊರೆಯುತ್ತದೆ. ದೇಶದಲ್ಲಿ ಸಿರಿಧಾನ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಅನ್ನ ಯೋಜನೆ ಪ್ರಾರಂಭಿಸಲಾಗುತ್ತಿದೆ.ಇದಕ್ಕಾಗಿ ಇಂಡಿಯನ್ ಮಿಲೆಟ್ಸ್ ಇನ್‌ಸ್ಟಿಟ್ಯೂಟ್ ಕೂಡ ರಚನೆಯಾಗಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

2 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

6 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

6 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

15 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

16 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

21 hours ago