ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ರಾಗಿ ವರ್ಷ 2023 ಎಂದು ಘೋಷಿಸಿದೆ. ಈ ನಿಟ್ಟಿನಲ್ಲಿ, ಅಂತರರಾಷ್ಟ್ರೀಯ ರಾಗಿ ವರ್ಷ 2023 ಅನ್ನು ಬೆಂಬಲಿಸಲು ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಾಗೆ ಸಿರಿಧಾನ್ಯವನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ. ಭಾರತದ ಉಪಕ್ರಮದಲ್ಲಿ ಜಗತ್ತು ಅಂತಾರಾಷ್ಟ್ರೀಯ ರಾಗಿ ವರ್ಷವನ್ನು ಆಚರಿಸುತ್ತಿದೆ.
ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ. ಅಂದರೆ ಸಿರಿ ಧಾನ್ಯ. ನಿಮ್ಮ ಶ್ರೀಅನ್ನ-ರಾಗಿ ಕರ್ನಾಟಕದ ಸಂಸ್ಕೃತಿಯ ಒಂದು ಭಾಗ, ಮತ್ತು ನಿಮ್ಮ ಸಾಮಾಜಿಕ ಅಸ್ಮಿತೆಯೂ ಹೌದು ಎಂದರು.
ಇಂದು ಇಡೀ ದೇಶವೇ ಕನ್ನಡಿಗರ ಹಾದಿಯಲ್ಲಿ ಸಾಗುತ್ತಿದ್ದು, ಸಿರಿಧಾನ್ಯಗಳನ್ನು ಶ್ರೀ ಅನ್ನ ಎಂದು ಕರೆಯಲು ಆರಂಭಿಸಿದೆ. ಇಂದು, ಇಡೀ ಜಗತ್ತು ಶ್ರೀಅನ್ನದ ಪ್ರಯೋಜನಗಳನ್ನು ಮತ್ತು ಅದರ ಅಗತ್ಯವನ್ನು ಅರ್ಥಮಾಡಿಕೊಳ್ಳುತ್ತಿರುವಾಗ, ಮುಂಬರುವ ದಿನಗಳಲ್ಲಿ ಅದರ ಬೇಡಿಕೆಯೂ ಹೆಚ್ಚಾಗಲಿದೆ. ಇದರಿಂದ ಕರ್ನಾಟಕದ ಜನತೆಗೆ, ಕರ್ನಾಟಕದ ಸಣ್ಣ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆ.
ವಾಸ್ತವವಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ರ ವಾರ್ಷಿಕ ಬಜೆಟ್ನ ಭಾಷಣದಲ್ಲಿ ಶ್ರೀ ಅನ್ನ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಶ್ರೀ ಅನ್ನ ಯೋಜನೆಯಿಂದ ಒರಟಾದ ಧಾನ್ಯಗಳಿಗೆ ಉತ್ತೇಜನ ದೊರೆಯುತ್ತದೆ. ದೇಶದಲ್ಲಿ ಸಿರಿಧಾನ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಅನ್ನ ಯೋಜನೆ ಪ್ರಾರಂಭಿಸಲಾಗುತ್ತಿದೆ.ಇದಕ್ಕಾಗಿ ಇಂಡಿಯನ್ ಮಿಲೆಟ್ಸ್ ಇನ್ಸ್ಟಿಟ್ಯೂಟ್ ಕೂಡ ರಚನೆಯಾಗಬೇಕು ಎಂದು ಹೇಳಿದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…