Advertisement
ಅನುಕ್ರಮ

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

Share

ಸತ್ಯ…….., ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ,  ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ, ಸತ್ಯದ ಹುಡುಕಾಟ ನಿರಂತರವಾಗಿರಲಿ…..

ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ, ಸತ್ಯದ ಹುಡುಕಾಟ ನಿರಂತರವಾಗಿರಲಿ…….

ನಿಮ್ಮ ಜ್ಞಾನದ ಮಟ್ಟ ತುಂಬಿ ಹರಿಯುತ್ತಿದ್ದರೂ,ಸತ್ಯದ ಹುಡುಕಾಟ ನಿರಂತರವಾಗಿರಲಿ‌…….

ಏಕೆಂದರೆ,
ಸತ್ಯ ಮಾತ್ರವೇ ಸೃಷ್ಟಿಯ, ಸಮಾಜದ ತಳಹದಿ, ಸತ್ಯವೆಂಬುದೇ ಇದೆಲ್ಲದರ ಪ್ರತ್ಯಕ್ಷ, ಪರೋಕ್ಷ ಶಕ್ತಿ……,

ಸತ್ಯದ ಅಗ್ನಿ ಪರೀಕ್ಷೆಯಲ್ಲಿ ಇವು ಗೆದ್ದು ಬಂದಾಗ ಮಾತ್ರವೇ ಈ ಎಲ್ಲಾ ಸಾಧನೆಗಳಿಗೆ ಅರ್ಥ ಸಿಗುವುದು……

ನಿಮ್ಮ ಆತ್ಮಾವಲೋಕನದ ಮೂಲವೂ ಸತ್ಯವೇ ಆಗಿರಲಿ…..

ಸತ್ಯದ ಹುಡುಕಾಟದ ವಿಫಲತೆಯೇ ಇಂದಿನ ಸಮಾಜದ ಬಹುತೇಕ ಸಮಸ್ಯೆಗಳ ಮೂಲ…..

ಅದು ರಾಜಕೀಯವಾಗಿರಲಿ, ಆಡಳಿತವಾಗಿರಲಿ, ಧಾರ್ಮಿಕವಾಗಿರಲಿ…..

ಸುಳ್ಳಿನ ಬುದ್ಧಿವಂತಿಕೆಯ ಪ್ರದರ್ಶನ ಹೆಚ್ಚಾಗಿ ಆಚರಣೆಗೆ ಬಂದು ಮನುಷ್ಯನ ಅಸ್ತಿತ್ವವೇ ಅನುಮಾನಕ್ಕೆ ಒಳಗಾಗಿದೆ…….

ಆತನ ವ್ಯಕ್ತಿತ್ವದ ವಿಶ್ವಾಸಾರ್ಹತೆಯೇ ಪ್ರಶ್ನಾರ್ಥಕವಾಗಿದೆ…….

ಇಡೀ ಸಮಾಜ ವಾಸ್ತವಿಕ ಸತ್ಯ ಒಪ್ಪಿಕೊಂಡು ಮುಂದುವರೆದಲ್ಲಿ , ಖಂಡಿತವಾಗಿಯೂ ಈಗ ನಮ್ಮನ್ನು ಕಾಡುತ್ತಿರುವ ಬಹುತೇಕ ಸಮಸ್ಯೆಗಳು ತನ್ನಿಂದ ತಾನೇ ಮಾಯವಾಗುತ್ತವೆ……

ಎಲ್ಲರೂ ಸತ್ಯ ಹರಿಶ್ಚಂದ್ರರಂತೆ ಆಗದಿದ್ದರೂ, ಕನಿಷ್ಠ ಅನಾವಶ್ಯಕವಾದ ಮತ್ತು ಅಪಾಯಕಾರಿ ಸುಳ್ಳುಗಳಿಂದ ದೂರವಿದ್ದರೂ ಸಾಕು…..

ಅದೇ ನಮ್ಮ ವ್ಯಕ್ತಿತ್ವ ಉತ್ತಮಗೊಳ್ಳಲು ಮತ್ತು ಸಾಕಷ್ಟು ನೆಮ್ಮದಿಯ, ಬದುಕಿಗೆ ಸಹಕಾರಿಯಾಗುತ್ತದೆ…..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…… ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

ಸಾರ್ವಕಾಲಿಕ ಸತ್ಯ,
ತಾತ್ಕಾಲಿಕ ಸತ್ಯ,
ಘಟನೆಯ ಸತ್ಯ,
ಸಾಂದರ್ಭಿಕ ಸತ್ಯ,
ಅರಿವಿನ ಸತ್ಯ,
ಊಹಾತ್ಮಕ ಸತ್ಯ, ವ್ಯಾವಹಾರಿಕ ಸತ್ಯ,
ಭಕ್ತಿ ಭಾವಗಳ ಸತ್ಯ,
ವೈಚಾರಿಕ ಸತ್ಯ,
ಈ ಕ್ಷಣದ ಸತ್ಯ,
ವಾಸ್ತವಿಕ ಸತ್ಯ……
ಹೀಗೆ ಸತ್ಯವೂ ಒಂದಷ್ಟು ರೂಪದಲ್ಲಿ ಸಿಗುತ್ತದೆ. ಸಮಗ್ರ ಚಿಂತನೆಯಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು……..

ಬರಹ :
ವಿವೇಕಾನಂದ. ಎಚ್.ಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

6 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago