Advertisement
ಅನುಕ್ರಮ

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

Share

ಸತ್ಯ…….., ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ,  ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…….

ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ, ಸತ್ಯದ ಹುಡುಕಾಟ ನಿರಂತರವಾಗಿರಲಿ…..

ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ, ಸತ್ಯದ ಹುಡುಕಾಟ ನಿರಂತರವಾಗಿರಲಿ…….

ನಿಮ್ಮ ಜ್ಞಾನದ ಮಟ್ಟ ತುಂಬಿ ಹರಿಯುತ್ತಿದ್ದರೂ,ಸತ್ಯದ ಹುಡುಕಾಟ ನಿರಂತರವಾಗಿರಲಿ‌…….

ಏಕೆಂದರೆ,
ಸತ್ಯ ಮಾತ್ರವೇ ಸೃಷ್ಟಿಯ, ಸಮಾಜದ ತಳಹದಿ, ಸತ್ಯವೆಂಬುದೇ ಇದೆಲ್ಲದರ ಪ್ರತ್ಯಕ್ಷ, ಪರೋಕ್ಷ ಶಕ್ತಿ……,

ಸತ್ಯದ ಅಗ್ನಿ ಪರೀಕ್ಷೆಯಲ್ಲಿ ಇವು ಗೆದ್ದು ಬಂದಾಗ ಮಾತ್ರವೇ ಈ ಎಲ್ಲಾ ಸಾಧನೆಗಳಿಗೆ ಅರ್ಥ ಸಿಗುವುದು……

ನಿಮ್ಮ ಆತ್ಮಾವಲೋಕನದ ಮೂಲವೂ ಸತ್ಯವೇ ಆಗಿರಲಿ…..

ಸತ್ಯದ ಹುಡುಕಾಟದ ವಿಫಲತೆಯೇ ಇಂದಿನ ಸಮಾಜದ ಬಹುತೇಕ ಸಮಸ್ಯೆಗಳ ಮೂಲ…..

ಅದು ರಾಜಕೀಯವಾಗಿರಲಿ, ಆಡಳಿತವಾಗಿರಲಿ, ಧಾರ್ಮಿಕವಾಗಿರಲಿ…..

ಸುಳ್ಳಿನ ಬುದ್ಧಿವಂತಿಕೆಯ ಪ್ರದರ್ಶನ ಹೆಚ್ಚಾಗಿ ಆಚರಣೆಗೆ ಬಂದು ಮನುಷ್ಯನ ಅಸ್ತಿತ್ವವೇ ಅನುಮಾನಕ್ಕೆ ಒಳಗಾಗಿದೆ…….

ಆತನ ವ್ಯಕ್ತಿತ್ವದ ವಿಶ್ವಾಸಾರ್ಹತೆಯೇ ಪ್ರಶ್ನಾರ್ಥಕವಾಗಿದೆ…….

ಇಡೀ ಸಮಾಜ ವಾಸ್ತವಿಕ ಸತ್ಯ ಒಪ್ಪಿಕೊಂಡು ಮುಂದುವರೆದಲ್ಲಿ , ಖಂಡಿತವಾಗಿಯೂ ಈಗ ನಮ್ಮನ್ನು ಕಾಡುತ್ತಿರುವ ಬಹುತೇಕ ಸಮಸ್ಯೆಗಳು ತನ್ನಿಂದ ತಾನೇ ಮಾಯವಾಗುತ್ತವೆ……

ಎಲ್ಲರೂ ಸತ್ಯ ಹರಿಶ್ಚಂದ್ರರಂತೆ ಆಗದಿದ್ದರೂ, ಕನಿಷ್ಠ ಅನಾವಶ್ಯಕವಾದ ಮತ್ತು ಅಪಾಯಕಾರಿ ಸುಳ್ಳುಗಳಿಂದ ದೂರವಿದ್ದರೂ ಸಾಕು…..

ಅದೇ ನಮ್ಮ ವ್ಯಕ್ತಿತ್ವ ಉತ್ತಮಗೊಳ್ಳಲು ಮತ್ತು ಸಾಕಷ್ಟು ನೆಮ್ಮದಿಯ, ಬದುಕಿಗೆ ಸಹಕಾರಿಯಾಗುತ್ತದೆ…..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ…… ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

ಸಾರ್ವಕಾಲಿಕ ಸತ್ಯ,
ತಾತ್ಕಾಲಿಕ ಸತ್ಯ,
ಘಟನೆಯ ಸತ್ಯ,
ಸಾಂದರ್ಭಿಕ ಸತ್ಯ,
ಅರಿವಿನ ಸತ್ಯ,
ಊಹಾತ್ಮಕ ಸತ್ಯ, ವ್ಯಾವಹಾರಿಕ ಸತ್ಯ,
ಭಕ್ತಿ ಭಾವಗಳ ಸತ್ಯ,
ವೈಚಾರಿಕ ಸತ್ಯ,
ಈ ಕ್ಷಣದ ಸತ್ಯ,
ವಾಸ್ತವಿಕ ಸತ್ಯ……
ಹೀಗೆ ಸತ್ಯವೂ ಒಂದಷ್ಟು ರೂಪದಲ್ಲಿ ಸಿಗುತ್ತದೆ. ಸಮಗ್ರ ಚಿಂತನೆಯಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು……..

ಬರಹ :
ವಿವೇಕಾನಂದ. ಎಚ್.ಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

15 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

22 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

22 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago