MIRROR FOCUS

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರವಾಸಿತಾಣಗಳು ಸ್ವಚ್ಛತೆಯಿಂದ ಕೂಡಿದ್ದರೆ ನೋಡಲು ತುಂಬಾ ಸೊಗಸಾಗಿದ್ದು,  ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಾಗುತ್ತದೆ. ಈ ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿ, ಪಕ್ಷಿಗಳಿಗೂ ಯಾವುದೇ ತೊಂದರೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣವನ್ನು ಪ್ಲಾಸ್ಟಿಕ್ ತ್ಯಾಜ್ಯಮುಕ್ತವಾಗಿಸಲು ಅರಣ್ಯ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ.

Advertisement

ಪಶ್ಚಿಮಘಟ್ಟಗಳ ಸದಾ ಹರಿದ್ವರ್ಣ ಕಾಡುಗಳ ನಡುವೆ ಬೆಳೆದು ನಿಂತಿರುವ ಶಿಖರಗಳು ಮತ್ತು ಅವುಗಳಿಗೆ ಹೊಂದಿಕೊಂಡಿರುವ ನೈಸರ್ಗಿಕ ಗುಹೆಗಳು, ಈ ಸ್ಥಳದ ಬಗ್ಗೆ ಇರುವ ರೋಮಾಂಚಕ ಪೌರಾಣಿಕ ಕಥೆಗಳು ಜನರ ಆಕರ್ಷಣೆಗೆ ಕಾರಣವಾಗಿವೆ. ಇಲ್ಲಿಗೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ಲಾಸ್ಟಿಕ್ ಬಾಟಲ್ ಗಳು, ಪ್ಲಾಸ್ಟಿಕ್ ಪೇಪರ್ ನಲ್ಲಿ ಕಟ್ಟಿದ ತಿಂಡಿ ತಿನಿಸುಗಳ ಪೊಟ್ಟಣದ ಪೇಪರ್ ಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಹೋಗುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಹಾಗಾಗಿ ಅರಣ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ ತೊಟ್ಟಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಅಲ್ಲಲ್ಲಿ ಶೌಚಾಲಯಗಳು, ಕಸದ ಬುಟ್ಟಿಗಳನ್ನು ಹಾಗೂ ಸೂಚನಾ ಫಲಕಗಳನ್ನು ಹಾಕಲಾಗಿದೆ.

ಇಲ್ಲಿನ ಅರಣ್ಯ ಪ್ರದೇಶದಲ್ಲಿರುವ ಹಲವಾರು ಪ್ರವಾಸಿ ತಾಣ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ಕಸಮುಕ್ತ ಹಾಗೂ ಪ್ಲಾಸ್ಟಿಕ್ ಮುಕ್ತ ಪ್ರದೇಶಗಳನ್ನಾಗಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇಲಾಖೆ ಜೊತೆಗೆ ಗ್ರಾಮ ಅರಣ್ಯ ಸಮಿತಿಯವರು ಮತ್ತು ಯುವಕ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಈ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅರಣ್ಯವನ್ನು ಕಸಮಕ್ತ ಮತ್ತು ಪ್ಲಾಸ್ಟಿಕ್ ಮುಕ್ತವಾಗಿಸುವುದು ಹಾಗೂ ವನ್ಯಜೀವಿಗಳಿಗೆ ಉತ್ತಮ ಪರಿಸರವನ್ನು ಕಲ್ಪಿಸಿಕೊಡುವುದು ಮುಖ್ಯ ಉದ್ದೇಶವಾಗಿದೆ .ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ ನೀಡುವ  ಪ್ರವಾಸಿಗರ ಜವಾಬ್ದಾರಿಯೂ ಅಷ್ಟೇ ಮುಖ್ಯವಾಗಿರುತ್ತದೆ ಎಂದು  ಹೊನ್ನಾವರ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಯೋಗೇಶ್ ಸಿ.ಕೆ ಹೇಳುತ್ತಾರೆ.

ಹೀಗಿದ್ದರೂ ಪ್ಲಾಸ್ಟಿಕ್ ಬಾಟಲಿಗಳನ್ನಾಗಲಿ ಅಥವಾ ಪ್ಲಾಸ್ಟಿಕ್ ಪೊಟ್ಟಣಗಳನ್ನಾಗಲಿ ಯಾರಾದರೂ ಎಸೆದಿದ್ದರೆ ಗಸ್ತುತಿರುಗುವ ಗ್ರಾಮ ಅರಣ್ಯ ಸಮಿತಿಯವರು ಅದನ್ನು ತೆಗೆದು ಕಸದ ತೊಟ್ಟಿಗೆ ಹಾಕುತ್ತಾರೆ. ಈ ನಿಟ್ಟಿನಲ್ಲಿ ಪ್ರವಾಸಿತಾಣದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ.. 

ಯಾಣದಲ್ಲಿ ಪ್ಲಾಸ್ಟಿಕ್ ಸ್ವಚ್ಚತೆಗೆ ಕೆಲಸ ಮಾಡುತ್ತಿದ್ದು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಗ್ರಾಮಸ್ಥರೂ ಸಹ ಸಹಕಾರ ನೀಡುತ್ತಿದ್ದಾರೆ ಎಂದು ಗ್ರಾಮ ಅರಣ್ಯ ಸಮಿತಿಯ ಶೈಲಾ ಪಟಗಾರ ಹೇಳುತ್ತಾರೆ.

ಯಾಣ ಪ್ರವಾಸಿತಾಣವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಅರಣ್ಯ ಇಲಾಖೆ ಮಹತ್ವಪೂರ್ಣ ಹೆಜ್ಜೆ ಇಟ್ಟಿರುವುದು ಪ್ರಶಂಸನೀಯ ಎಂದು ಪ್ರವಾಸಿಗ  ಡಾ. ವೆಂಕಟೇಶ್   ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

4 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

13 hours ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…

13 hours ago

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ  ಹೊಳೆಮತ್ತಿ ನೇಚರ್…

21 hours ago

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…

23 hours ago