ಬಾಲ್ಯದಲ್ಲಿ ಮಕ್ಕಳಿಗೆ ದೊರಕಬೇಕಾದ ಸರಿಯಾದ ಪಾಲನೆ ಪೋಷಣೆಗಳಿಂದ ವಂಚಿತರಾಗದಂತೆ ನೋಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯದಲ್ಲಿ ಸುಸಂಸ್ಕೃತ ಪ್ರಜೆಗಳಾಗಿ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದರು.
ಸೋಮವಾರ ಅವರು ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ಮಕ್ಕಳ ಪಾಲನಾ ಸಂಸ್ಥೆಗಳ ಜಿಲ್ಲಾ ತನಿಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಮಕ್ಕಳ ಪಾಲನಾ ಕೇಂದ್ರಗಳನ್ನು ಬಾಲನ್ಯಾಯ ಕಾಯಿದೆ ಅನ್ವಯ ನೋಂದಾಯಿಸಿಕೊಳ್ಳಬೇಕು ಹಾಗೂ ಆಗಿಂದಾಗ್ಗೆ ಪಾಲನಾ ಕೇಂದ್ರಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ, ಪರೀಶಿಲನೆ ನಡೆಸುವಂತೆ ಆದೇಶಿಸಿದರು. ಮಕ್ಕಳ ರಕ್ಷಣೆ ಹಾಗೂ ಪೋಷಣೆಗೆ ಮಕ್ಕಳ ಸರ್ವತೋಮುಖ ಅಭಿವೃಧ್ದಿಗೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕೆಂದು ಸೂಚಿಸಿದರು.
ನಿರಂತರವಾಗಿ ಯಾವುದೇ ವಿದ್ಯಾರ್ಥಿಗಳು ಶಾಲೆಗೆ ಗೈರು ಹಾಜರಾದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು. ಇದರಿಂದ ಬಾಲ್ಯ ವಿವಾಹ, ಬಾಲಕಾರ್ಮಿಕರು, ಮಕ್ಕಳ ನಾಪತ್ತೆಯಂತಹಾ ಪ್ರಕರಣಗಳನ್ನು ತಡೆಯುವಲ್ಲಿ ಯಶಸ್ವಿಯಾಗಬಹುದು ಎಂದರು. ಜಿಲ್ಲೆಯ ಬಾಲ ನಿಯಮ ಮಂಡಳಿಯಲ್ಲಿ 2008 ರಿಂದ ಈವರಗೆ 413 ಪ್ರಕರಣಗಳು ಬಾಕಿ ಇದ್ದು 50 ಪ್ರಕರಣಗಳಲ್ಲಿ ದೋಷಾರೋಪಣ ಪತ್ರ ಸಲ್ಲಿಸಲು ಬಾಕಿ ಇದೆ ಎಂದ ಅವರು, ಪ್ರಕರಣಗಳು ಯಾವ ಹಂತದಲ್ಲಿದೆ ಎಂಬ ಮಾಹಿತಿಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಇಲಾಖೆಯ ಅಧಿಕಾರಿಗಳ ನೆರವಿನೊಂದಿಗೆ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಪಡಿಸಿಸುವಂತೆ ಸೂಚಿಸಿದರು.
2010 ರಿಂದ ಈವರೆಗೆ ದತ್ತು ಕೇಂದ್ರಗಳಲ್ಲಿ 182 ಮಕ್ಕಳು ದಾಖಲಾಗಿದ್ದು, ಅವರಲ್ಲಿ 21 ಮಕ್ಕಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. 125 ಮಕ್ಕಳನ್ನು ದತ್ತು ನೀಡಲಾಗಿದ್ದು, ದತ್ತು ಕೇಂದ್ರದಲ್ಲಿ ಅನಾರೋಗ್ಯದಲ್ಲಿ 12 ಮಕ್ಕಳು ಮರಣ ಹೊಂದಿದ್ದಾರೆ. 8 ಮಕ್ಕಳನ್ನು ಬೇರೆ ಸಂಸ್ಥೆಗೆ ವರ್ಗಾಯಿಸಲಾಗಿದೆ. 3 ಮಕ್ಕಳನ್ನು ಪೋಷಕತ್ವಕ್ಕೆ ನೀಡಲಾಗಿದೆ. 14 ಮಕ್ಕಳು ಪ್ರಸ್ತುತ ಸಂಸ್ಥೆಯಲ್ಲಿದ್ದು, ಆ ಮಕ್ಕಳನ್ನು ಆರೋಗ್ಯವಂತರಾಗಿ ಪಾಲನೆ ಪೋಷಣೆ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಐವಿ ಸೋಂಕಿತ, ಬಾದಿತ ಮಕ್ಕಳು ಹಾಗೂ ಇಂತಹ ಕಾಯಿಲೆಯಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಪಾಲನೆಯಾಗುವ ಬಗ್ಗೆ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದರು. ವಿಶೇಷ ಪಾಲನಾ ಯೋಜನೆಯ ಅನುದಾನವನ್ನು ಆರ್.ಟಿ.ಜಿ.ಎಸ್ ಮೂಲಕ ಅರ್ಹ ಪಲಾನುಭವಿಗಳಿಗೆ ತಲುಪಿಸಬೇಕು ಎಂದರು.
.
ಸಭೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪ ಎ.ಜೆ, ಮಕ್ಕಳ ಆಯೋಗದ ಸದಸ್ಯ ಡಿ. ಶಂಕರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗಟ್ರೂಡ್ ವೇಗಸ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪಬೋವಿ, ಮತ್ತಿತರರು ಉಪಸ್ಥಿತರಿದ್ದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…