ದೇಶದಲ್ಲಿ ಮಲೇರಿಯಾ ಪ್ರಕರಣಗಳು ಶೇಕಡ 80 ಕ್ಕಿಂತಲೂ ಹೆಚ್ಚು ಮತ್ತು ಸಾವುಗಳು ಶೇಕಡ 78 ರಷ್ಟು ಕಡಿಮೆಯಾಗುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳ ವೇದಿಕೆ- 2025 ಕಾರ್ಯಕ್ರಮವನ್ನುದ್ದೇಶಿಸಿ ಅವರು, ದೇಶದ ಆರೋಗ್ಯ ಕ್ಷೇತ್ರದಲ್ಲಿನ ಮಹತ್ವದ ಸುಧಾರಣೆಗಳ ಕುರಿತು ಮಾಹಿತಿ ನೀಡಿದರು. ದೇಶ, ಕ್ಷಯರೋಗ ಪ್ರಕರಣಗಳಲ್ಲಿ ಶೇಕಡ 21ರಷ್ಟು ಕುಸಿತವನ್ನು ಕಂಡಿದೆ. ಇದು ಜಾಗತಿಕ ಇಳಿಕೆಯ ದರವಾದ ಶೇಕಡ 12 ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. 2014ರಲ್ಲಿ ಪ್ರತಿ ಲಕ್ಷ ಜನನಗಳಿಗೆ, 130 ರಷ್ಟಿದ್ದ ಮರಣ ಪ್ರಮಾಣ, ಈ ವರ್ಷ 88 ಕ್ಕೆ ಇಳಿಕೆಯಾಗಿದೆ. ಅಲ್ಲದೇ, ಪ್ರಸ್ತುತ ವರ್ಷದಲ್ಲಿ, ಶಿಶು ಮರಣ ಪ್ರಮಾಣ 27 ಕ್ಕೆ ತಗ್ಗಿದೆ ಎಂದು ತಿಳಿಸಿದ್ದಾರೆ. ದೇಶದ ಪ್ರತಿ 2 ಸಾವಿರ ಜನಸಂಖ್ಯೆಗೆ ಒಂದು ಆರೋಗ್ಯ ಮಂದಿರವನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈಗಾಗಲೇ 30 ಸಾವಿರಕ್ಕೂ ಹೆಚ್ಚು ಕೇಂದ್ರಗಳು, ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ಪ್ರಮಾಣೀಕರಣವನ್ನು ಪಡೆದಿವೆ. ಆಯುಷ್ಮಾನ್ ಭಾರತ್ ಯೋಜನೆಯಿಂದಾಗಿ, ಜನರು ಭರಿಸುವ ಆರೋಗ್ಯ ವೆಚ್ಚ ಶೇಕಡಾ 69 ರಿಂದ ಶೇಕಡಾ 39 ಕ್ಕೆ ಇಳಿಕೆಯಾಗಿದೆ. ಇದು ಬಡ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡಿದೆ ಎಂದರು.
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್ಎ, ಪ್ರೋಟೀನ್ಗಳಂತೆ ಪ್ಲಾಸ್ಟಿಕ್ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…