ದೇಶದಲ್ಲಿ ಮಲೇರಿಯಾ ಪ್ರಕರಣಗಳು ಶೇಕಡ 80 ಕ್ಕಿಂತಲೂ ಹೆಚ್ಚು ಮತ್ತು ಸಾವುಗಳು ಶೇಕಡ 78 ರಷ್ಟು ಕಡಿಮೆಯಾಗುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳ ವೇದಿಕೆ- 2025 ಕಾರ್ಯಕ್ರಮವನ್ನುದ್ದೇಶಿಸಿ ಅವರು, ದೇಶದ ಆರೋಗ್ಯ ಕ್ಷೇತ್ರದಲ್ಲಿನ ಮಹತ್ವದ ಸುಧಾರಣೆಗಳ ಕುರಿತು ಮಾಹಿತಿ ನೀಡಿದರು. ದೇಶ, ಕ್ಷಯರೋಗ ಪ್ರಕರಣಗಳಲ್ಲಿ ಶೇಕಡ 21ರಷ್ಟು ಕುಸಿತವನ್ನು ಕಂಡಿದೆ. ಇದು ಜಾಗತಿಕ ಇಳಿಕೆಯ ದರವಾದ ಶೇಕಡ 12 ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. 2014ರಲ್ಲಿ ಪ್ರತಿ ಲಕ್ಷ ಜನನಗಳಿಗೆ, 130 ರಷ್ಟಿದ್ದ ಮರಣ ಪ್ರಮಾಣ, ಈ ವರ್ಷ 88 ಕ್ಕೆ ಇಳಿಕೆಯಾಗಿದೆ. ಅಲ್ಲದೇ, ಪ್ರಸ್ತುತ ವರ್ಷದಲ್ಲಿ, ಶಿಶು ಮರಣ ಪ್ರಮಾಣ 27 ಕ್ಕೆ ತಗ್ಗಿದೆ ಎಂದು ತಿಳಿಸಿದ್ದಾರೆ. ದೇಶದ ಪ್ರತಿ 2 ಸಾವಿರ ಜನಸಂಖ್ಯೆಗೆ ಒಂದು ಆರೋಗ್ಯ ಮಂದಿರವನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈಗಾಗಲೇ 30 ಸಾವಿರಕ್ಕೂ ಹೆಚ್ಚು ಕೇಂದ್ರಗಳು, ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ಪ್ರಮಾಣೀಕರಣವನ್ನು ಪಡೆದಿವೆ. ಆಯುಷ್ಮಾನ್ ಭಾರತ್ ಯೋಜನೆಯಿಂದಾಗಿ, ಜನರು ಭರಿಸುವ ಆರೋಗ್ಯ ವೆಚ್ಚ ಶೇಕಡಾ 69 ರಿಂದ ಶೇಕಡಾ 39 ಕ್ಕೆ ಇಳಿಕೆಯಾಗಿದೆ. ಇದು ಬಡ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡಿದೆ ಎಂದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…