ದೇಶದಲ್ಲಿ ಮಲೇರಿಯಾ ಪ್ರಕರಣಗಳು ಶೇಕಡ 80 ಕ್ಕಿಂತಲೂ ಹೆಚ್ಚು ಮತ್ತು ಸಾವುಗಳು ಶೇಕಡ 78 ರಷ್ಟು ಕಡಿಮೆಯಾಗುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳ ವೇದಿಕೆ- 2025 ಕಾರ್ಯಕ್ರಮವನ್ನುದ್ದೇಶಿಸಿ ಅವರು, ದೇಶದ ಆರೋಗ್ಯ ಕ್ಷೇತ್ರದಲ್ಲಿನ ಮಹತ್ವದ ಸುಧಾರಣೆಗಳ ಕುರಿತು ಮಾಹಿತಿ ನೀಡಿದರು. ದೇಶ, ಕ್ಷಯರೋಗ ಪ್ರಕರಣಗಳಲ್ಲಿ ಶೇಕಡ 21ರಷ್ಟು ಕುಸಿತವನ್ನು ಕಂಡಿದೆ. ಇದು ಜಾಗತಿಕ ಇಳಿಕೆಯ ದರವಾದ ಶೇಕಡ 12 ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. 2014ರಲ್ಲಿ ಪ್ರತಿ ಲಕ್ಷ ಜನನಗಳಿಗೆ, 130 ರಷ್ಟಿದ್ದ ಮರಣ ಪ್ರಮಾಣ, ಈ ವರ್ಷ 88 ಕ್ಕೆ ಇಳಿಕೆಯಾಗಿದೆ. ಅಲ್ಲದೇ, ಪ್ರಸ್ತುತ ವರ್ಷದಲ್ಲಿ, ಶಿಶು ಮರಣ ಪ್ರಮಾಣ 27 ಕ್ಕೆ ತಗ್ಗಿದೆ ಎಂದು ತಿಳಿಸಿದ್ದಾರೆ. ದೇಶದ ಪ್ರತಿ 2 ಸಾವಿರ ಜನಸಂಖ್ಯೆಗೆ ಒಂದು ಆರೋಗ್ಯ ಮಂದಿರವನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈಗಾಗಲೇ 30 ಸಾವಿರಕ್ಕೂ ಹೆಚ್ಚು ಕೇಂದ್ರಗಳು, ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ಪ್ರಮಾಣೀಕರಣವನ್ನು ಪಡೆದಿವೆ. ಆಯುಷ್ಮಾನ್ ಭಾರತ್ ಯೋಜನೆಯಿಂದಾಗಿ, ಜನರು ಭರಿಸುವ ಆರೋಗ್ಯ ವೆಚ್ಚ ಶೇಕಡಾ 69 ರಿಂದ ಶೇಕಡಾ 39 ಕ್ಕೆ ಇಳಿಕೆಯಾಗಿದೆ. ಇದು ಬಡ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡಿದೆ ಎಂದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…