ಮಲೆನಾಡು, ಕರಾವಳಿ ಜಿಲ್ಲೆಗಳ ಸಮಸ್ಯೆಗಳಿಗೆ ಪರಿಹಾರಕ್ಕೆ ಸೂತ್ರ ತಯಾರಿ | ಅ.31ರಂದು ಸಮಾಲೋಚನಾ ಸಭೆ |

October 13, 2023
11:53 PM

ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಹಾಸನ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಸಮಗ್ರವಾದ ಅಧ್ಯಯನ ಮಾಡಿ ಅವುಗಳಿಗೆ ಪರಿಹಾರ ಸೂತ್ರ ರೂಪಿಸುವ ನಿಟ್ಟಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟವು ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ಅ.31ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ವಿಜಯನಗರದ ಆದಿ ಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮರೋಳ್ಳಿ ತಿಳಿಸಿದ್ದಾರೆ.

ರೈತರ ಕೃಷಿ ಬೆಳೆಗಳಿಗೆ ಮಾರಕ ರೋಗಗಳ ನಿರ್ಮೂಲನೆಗೆ ಸರಕಾರ ವಿಶೇಷ ಕಾಳಜಿ ವಹಿಸಿ, ತುರ್ತು ಕ್ರಮ ವಹಿಸುವ ಮೂಲಕ ಅಡಿಕೆಗೆ ತಗುಲಿರುವ ಎಲೆಚುಕ್ಕೆ ರೋಗದ ವೈಜ್ಞಾನಿಕ ಸಂಶೋಧನೆ ನಡೆಸಿ, ಪರಿಹಾರ ಕಲ್ಪಿಸಬೇಕು. ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಹಕ್ಕು ನೀಡುವಲ್ಲಿನ ಮತ್ತು ದರಖಾಸ್ತು ಮಂಜೂರಾತಿಗೆ ಸರಕಾರ ಕಂದಾಯ ಇಲಾಖೆ ಮೂಲಕ ತುರ್ತು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ಕರಾವಳಿ ಮಲೆನಾಡು ಪ್ರದೇಶದ ಪ್ರಮುಖ ಬೆಳೆಗಳಿಗೆ ಕಾಣಿಸಿಕೊಂಡಿರುವ ವಿವಿಧ ರೋಗಗಳು, ಕಂದಾಯ, ಅರಣ್ಯ ಭೂಮಿ, ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಲ್ಲಿ ಎದುರಾಗಿರುವ ತೊಡಕುಗಳು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಎದುರಾಗುವ ಲಾಭ ನಷ್ಟ ಕಷ್ಟ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಒಕ್ಕೂಟ ವಿಸ್ತೃತ ಚರ್ಚೆ ನಡೆಸಲು ತೀರ್ಮಾನಿಸಿದೆ.ಮಲೆನಾಡು- ಕರಾವಳಿ ಭಾಗದಲ್ಲಿ ಮೆಡಿಕಲ್ ಕಾಲೇಜು, ಐಐಟಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆ ರೂಪಿಸಲು ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶ ಒಕ್ಕೂಟದ ಮುಂದಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror