ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಹಾಸನ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಸಮಗ್ರವಾದ ಅಧ್ಯಯನ ಮಾಡಿ ಅವುಗಳಿಗೆ ಪರಿಹಾರ ಸೂತ್ರ ರೂಪಿಸುವ ನಿಟ್ಟಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟವು ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ಅ.31ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ವಿಜಯನಗರದ ಆದಿ ಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮರೋಳ್ಳಿ ತಿಳಿಸಿದ್ದಾರೆ.
ರೈತರ ಕೃಷಿ ಬೆಳೆಗಳಿಗೆ ಮಾರಕ ರೋಗಗಳ ನಿರ್ಮೂಲನೆಗೆ ಸರಕಾರ ವಿಶೇಷ ಕಾಳಜಿ ವಹಿಸಿ, ತುರ್ತು ಕ್ರಮ ವಹಿಸುವ ಮೂಲಕ ಅಡಿಕೆಗೆ ತಗುಲಿರುವ ಎಲೆಚುಕ್ಕೆ ರೋಗದ ವೈಜ್ಞಾನಿಕ ಸಂಶೋಧನೆ ನಡೆಸಿ, ಪರಿಹಾರ ಕಲ್ಪಿಸಬೇಕು. ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಹಕ್ಕು ನೀಡುವಲ್ಲಿನ ಮತ್ತು ದರಖಾಸ್ತು ಮಂಜೂರಾತಿಗೆ ಸರಕಾರ ಕಂದಾಯ ಇಲಾಖೆ ಮೂಲಕ ತುರ್ತು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.
ಕರಾವಳಿ ಮಲೆನಾಡು ಪ್ರದೇಶದ ಪ್ರಮುಖ ಬೆಳೆಗಳಿಗೆ ಕಾಣಿಸಿಕೊಂಡಿರುವ ವಿವಿಧ ರೋಗಗಳು, ಕಂದಾಯ, ಅರಣ್ಯ ಭೂಮಿ, ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಲ್ಲಿ ಎದುರಾಗಿರುವ ತೊಡಕುಗಳು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಎದುರಾಗುವ ಲಾಭ ನಷ್ಟ ಕಷ್ಟ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಒಕ್ಕೂಟ ವಿಸ್ತೃತ ಚರ್ಚೆ ನಡೆಸಲು ತೀರ್ಮಾನಿಸಿದೆ.ಮಲೆನಾಡು- ಕರಾವಳಿ ಭಾಗದಲ್ಲಿ ಮೆಡಿಕಲ್ ಕಾಲೇಜು, ಐಐಟಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆ ರೂಪಿಸಲು ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶ ಒಕ್ಕೂಟದ ಮುಂದಿದೆ ಎಂದರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…