Advertisement
ಸುದ್ದಿಗಳು

ಮಲೆನಾಡು, ಕರಾವಳಿ ಜಿಲ್ಲೆಗಳ ಸಮಸ್ಯೆಗಳಿಗೆ ಪರಿಹಾರಕ್ಕೆ ಸೂತ್ರ ತಯಾರಿ | ಅ.31ರಂದು ಸಮಾಲೋಚನಾ ಸಭೆ |

Share

ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಹಾಸನ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಸಮಗ್ರವಾದ ಅಧ್ಯಯನ ಮಾಡಿ ಅವುಗಳಿಗೆ ಪರಿಹಾರ ಸೂತ್ರ ರೂಪಿಸುವ ನಿಟ್ಟಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟವು ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ಅ.31ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ವಿಜಯನಗರದ ಆದಿ ಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮರೋಳ್ಳಿ ತಿಳಿಸಿದ್ದಾರೆ.

ರೈತರ ಕೃಷಿ ಬೆಳೆಗಳಿಗೆ ಮಾರಕ ರೋಗಗಳ ನಿರ್ಮೂಲನೆಗೆ ಸರಕಾರ ವಿಶೇಷ ಕಾಳಜಿ ವಹಿಸಿ, ತುರ್ತು ಕ್ರಮ ವಹಿಸುವ ಮೂಲಕ ಅಡಿಕೆಗೆ ತಗುಲಿರುವ ಎಲೆಚುಕ್ಕೆ ರೋಗದ ವೈಜ್ಞಾನಿಕ ಸಂಶೋಧನೆ ನಡೆಸಿ, ಪರಿಹಾರ ಕಲ್ಪಿಸಬೇಕು. ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಹಕ್ಕು ನೀಡುವಲ್ಲಿನ ಮತ್ತು ದರಖಾಸ್ತು ಮಂಜೂರಾತಿಗೆ ಸರಕಾರ ಕಂದಾಯ ಇಲಾಖೆ ಮೂಲಕ ತುರ್ತು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ಕರಾವಳಿ ಮಲೆನಾಡು ಪ್ರದೇಶದ ಪ್ರಮುಖ ಬೆಳೆಗಳಿಗೆ ಕಾಣಿಸಿಕೊಂಡಿರುವ ವಿವಿಧ ರೋಗಗಳು, ಕಂದಾಯ, ಅರಣ್ಯ ಭೂಮಿ, ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಲ್ಲಿ ಎದುರಾಗಿರುವ ತೊಡಕುಗಳು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಎದುರಾಗುವ ಲಾಭ ನಷ್ಟ ಕಷ್ಟ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಒಕ್ಕೂಟ ವಿಸ್ತೃತ ಚರ್ಚೆ ನಡೆಸಲು ತೀರ್ಮಾನಿಸಿದೆ.ಮಲೆನಾಡು- ಕರಾವಳಿ ಭಾಗದಲ್ಲಿ ಮೆಡಿಕಲ್ ಕಾಲೇಜು, ಐಐಟಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆ ರೂಪಿಸಲು ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶ ಒಕ್ಕೂಟದ ಮುಂದಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

56 minutes ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

8 hours ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

16 hours ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

16 hours ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

1 day ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

1 day ago