Advertisement
ಸುದ್ದಿಗಳು

ಮಲೆನಾಡು, ಕರಾವಳಿ ಜಿಲ್ಲೆಗಳ ಸಮಸ್ಯೆಗಳಿಗೆ ಪರಿಹಾರಕ್ಕೆ ಸೂತ್ರ ತಯಾರಿ | ಅ.31ರಂದು ಸಮಾಲೋಚನಾ ಸಭೆ |

Share

ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಹಾಸನ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಸಮಗ್ರವಾದ ಅಧ್ಯಯನ ಮಾಡಿ ಅವುಗಳಿಗೆ ಪರಿಹಾರ ಸೂತ್ರ ರೂಪಿಸುವ ನಿಟ್ಟಿನಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟವು ಕಾರ್ಯಪ್ರವೃತ್ತವಾಗಿದ್ದು, ಈ ನಿಟ್ಟಿನಲ್ಲಿ ಅ.31ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ವಿಜಯನಗರದ ಆದಿ ಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮರೋಳ್ಳಿ ತಿಳಿಸಿದ್ದಾರೆ.

ರೈತರ ಕೃಷಿ ಬೆಳೆಗಳಿಗೆ ಮಾರಕ ರೋಗಗಳ ನಿರ್ಮೂಲನೆಗೆ ಸರಕಾರ ವಿಶೇಷ ಕಾಳಜಿ ವಹಿಸಿ, ತುರ್ತು ಕ್ರಮ ವಹಿಸುವ ಮೂಲಕ ಅಡಿಕೆಗೆ ತಗುಲಿರುವ ಎಲೆಚುಕ್ಕೆ ರೋಗದ ವೈಜ್ಞಾನಿಕ ಸಂಶೋಧನೆ ನಡೆಸಿ, ಪರಿಹಾರ ಕಲ್ಪಿಸಬೇಕು. ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಹಕ್ಕು ನೀಡುವಲ್ಲಿನ ಮತ್ತು ದರಖಾಸ್ತು ಮಂಜೂರಾತಿಗೆ ಸರಕಾರ ಕಂದಾಯ ಇಲಾಖೆ ಮೂಲಕ ತುರ್ತು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು.

Advertisement

ಕರಾವಳಿ ಮಲೆನಾಡು ಪ್ರದೇಶದ ಪ್ರಮುಖ ಬೆಳೆಗಳಿಗೆ ಕಾಣಿಸಿಕೊಂಡಿರುವ ವಿವಿಧ ರೋಗಗಳು, ಕಂದಾಯ, ಅರಣ್ಯ ಭೂಮಿ, ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಲ್ಲಿ ಎದುರಾಗಿರುವ ತೊಡಕುಗಳು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಎದುರಾಗುವ ಲಾಭ ನಷ್ಟ ಕಷ್ಟ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಒಕ್ಕೂಟ ವಿಸ್ತೃತ ಚರ್ಚೆ ನಡೆಸಲು ತೀರ್ಮಾನಿಸಿದೆ.ಮಲೆನಾಡು- ಕರಾವಳಿ ಭಾಗದಲ್ಲಿ ಮೆಡಿಕಲ್ ಕಾಲೇಜು, ಐಐಟಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆ ರೂಪಿಸಲು ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶ ಒಕ್ಕೂಟದ ಮುಂದಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

3 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

20 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

20 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

24 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

1 day ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

1 day ago