ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…