ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…