ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…