ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…