ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…