ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…