Advertisement
ಸುದ್ದಿಗಳು

ನೀನಾಸಂಗೆ ಆಯ್ಕೆಯಾದ ಮಮತಾ ಕಲ್ಮಕಾರ್‌ಗೆ ರಂಗಮನೆಯಲ್ಲಿ ಬೀಳ್ಕೊಡುಗೆ

Share

ರಾಜ್ಯದ ಅತ್ಯತ್ತಮ ಮತ್ತು ಪ್ರತಿಷ್ಠಿತ ರಂಗ ತರಬೇತಿ ಸಂಸ್ಥೆಯಾದ ನೀನಾಸಂಗೆ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು ಸುಳ್ಯ ತಾಲೂಕಿನ ಕಲ್ಮಕಾರಿನ ಮಮತ ಆಯ್ಕೆಯಾಗಿದ್ದಾರೆ.

ರಾಜ್ಯದ ವಿವಿಧ ಕಡೆಗಳಿಂದ ಸುಮಾರು 125 ರಂಗಾಸಕ್ತರು ಭಾಗವಹಿಸಿದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಮತಾ ಕಲ್ಮಕಾರು ಆಯ್ಕೆ ಆಗಿರುವುದು ಹೆಮ್ಮೆಯ ವಿಚಾರ.

ಸುಳ್ಯದ ರಂಗಮನೆಯ ವಿದ್ಯಾರ್ಥಿಯಾಗಿರುವ ಮಮತ ಅರೆಭಾಷೆ ಅಕಾಡೆಮಿ ಪ್ರಾಯೋಜಿತ ʼಸಾಹೇಬ್ರು ಬಂದವೇʼ ನಾಟಕದಲ್ಲಿ ಕಾವೇರಿ ಎಂಬ ಮುಖ್ಯಪಾತ್ರದಲ್ಲಿ ನಟಿಸಿ ಜನಮನ ಗೆದ್ದಿದ್ದಳು. ಅದೂ ಅಲ್ಲದೆ ಒಂದಷ್ಟು ಕಿರುಚಿತ್ರದಲ್ಲಿಯೂ ಭಾಗವಹಿಸಿದ್ದಳು.

ಈಗ ನೀನಾಸಂಗೆ ಹೊರಟಿರುವ ಮಮತಾಗೆ ರಂಗಮನೆಯಲ್ಲಿ ಆತ್ಮೀಯವಾಗಿ ಹರಸಿ ಬೀಳ್ಕೊಡಲಾಯಿತು.

ರಂಗಮನೆಯ ನಿರ್ದೇಶಕ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾದ ಜೀವನ್ ರಾಂ ಸುಳ್ಯ ಅವರು ರಂಗಮನೆಯಲ್ಲಿ ಮಮತ ಕಳೆದ ದಿನಗಳನ್ನು ನೆನೆದು ರಂಗಮನೆಯ ಪರವಾಗಿ ನೆನಪಿನ ಕಾಣಿಕೆ ನೀಡಿ ಹರಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮಿನಾರಾಯಣ ಕಜೆಗದ್ದೆ ಅವರು ಮಾತನಾಡಿ ಅರೆಭಾಷೆ ಅಕಾಡೆಮಿ ವತಿಯಿಂದ ನಾಟಕ‌ ಹಮ್ಮಿಕೊಂಡ ಉದ್ದೇಶ ಮತ್ತು ಅದರಿಂದ ಬಂದ ಪ್ರತಿಫಲವೇ ಇಂದು ಮಮತಳ ಆಯ್ಕೆ‌ ಎಂದು ಸಂತಸ ವ್ಯಕ್ತಪಡಿಸಿದರು. ರವೀಶ್ ಪಡ್ಡಂಬೈಲು ಮತ್ತು ಶಿಕ್ಷಕಿ ಮಮತಾ ಪಡ್ಡಂಬೈಲು ಶುಭ ಹಾರೈಸಿದರು.

ಇದೇ ಸಂದರ್ಭ ಸಾಹೇಬ್ರು ಬಂದವೇ ನಾಟಕ ತಂಡದ ವಿನೋದ್ ಮೂಡಗದ್ದೆ, ಹಾರಂಬಿ ಯತೀನ್ ವೆಂಕಪ್ಪ, ನಿತ್ಯಾನಂದ ಮಲೆಯಾಳ, ಸುಶ್ಮಿತಾ ಮೋಹನ್ ,ಯೋಗಿತಾ ಬಂಗಾರಕೋಡಿ, ಅಮೃತ್ ಕುಕ್ಕೇಟಿ, ಬಂಗಾರಕೋಡಿ ಶಿವಗಣೇಶ್ ಮತ್ತು ಬಂಗಾರಕೋಡಿ ಚೇತಸ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

2 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

13 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

14 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

21 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

22 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago