ರಾಜ್ಯದ ಅತ್ಯತ್ತಮ ಮತ್ತು ಪ್ರತಿಷ್ಠಿತ ರಂಗ ತರಬೇತಿ ಸಂಸ್ಥೆಯಾದ ನೀನಾಸಂಗೆ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು ಸುಳ್ಯ ತಾಲೂಕಿನ ಕಲ್ಮಕಾರಿನ ಮಮತ ಆಯ್ಕೆಯಾಗಿದ್ದಾರೆ.
ರಾಜ್ಯದ ವಿವಿಧ ಕಡೆಗಳಿಂದ ಸುಮಾರು 125 ರಂಗಾಸಕ್ತರು ಭಾಗವಹಿಸಿದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಮತಾ ಕಲ್ಮಕಾರು ಆಯ್ಕೆ ಆಗಿರುವುದು ಹೆಮ್ಮೆಯ ವಿಚಾರ.
ಸುಳ್ಯದ ರಂಗಮನೆಯ ವಿದ್ಯಾರ್ಥಿಯಾಗಿರುವ ಮಮತ ಅರೆಭಾಷೆ ಅಕಾಡೆಮಿ ಪ್ರಾಯೋಜಿತ ʼಸಾಹೇಬ್ರು ಬಂದವೇʼ ನಾಟಕದಲ್ಲಿ ಕಾವೇರಿ ಎಂಬ ಮುಖ್ಯಪಾತ್ರದಲ್ಲಿ ನಟಿಸಿ ಜನಮನ ಗೆದ್ದಿದ್ದಳು. ಅದೂ ಅಲ್ಲದೆ ಒಂದಷ್ಟು ಕಿರುಚಿತ್ರದಲ್ಲಿಯೂ ಭಾಗವಹಿಸಿದ್ದಳು.
ಈಗ ನೀನಾಸಂಗೆ ಹೊರಟಿರುವ ಮಮತಾಗೆ ರಂಗಮನೆಯಲ್ಲಿ ಆತ್ಮೀಯವಾಗಿ ಹರಸಿ ಬೀಳ್ಕೊಡಲಾಯಿತು.
ರಂಗಮನೆಯ ನಿರ್ದೇಶಕ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾದ ಜೀವನ್ ರಾಂ ಸುಳ್ಯ ಅವರು ರಂಗಮನೆಯಲ್ಲಿ ಮಮತ ಕಳೆದ ದಿನಗಳನ್ನು ನೆನೆದು ರಂಗಮನೆಯ ಪರವಾಗಿ ನೆನಪಿನ ಕಾಣಿಕೆ ನೀಡಿ ಹರಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮಿನಾರಾಯಣ ಕಜೆಗದ್ದೆ ಅವರು ಮಾತನಾಡಿ ಅರೆಭಾಷೆ ಅಕಾಡೆಮಿ ವತಿಯಿಂದ ನಾಟಕ ಹಮ್ಮಿಕೊಂಡ ಉದ್ದೇಶ ಮತ್ತು ಅದರಿಂದ ಬಂದ ಪ್ರತಿಫಲವೇ ಇಂದು ಮಮತಳ ಆಯ್ಕೆ ಎಂದು ಸಂತಸ ವ್ಯಕ್ತಪಡಿಸಿದರು. ರವೀಶ್ ಪಡ್ಡಂಬೈಲು ಮತ್ತು ಶಿಕ್ಷಕಿ ಮಮತಾ ಪಡ್ಡಂಬೈಲು ಶುಭ ಹಾರೈಸಿದರು.
ಇದೇ ಸಂದರ್ಭ ಸಾಹೇಬ್ರು ಬಂದವೇ ನಾಟಕ ತಂಡದ ವಿನೋದ್ ಮೂಡಗದ್ದೆ, ಹಾರಂಬಿ ಯತೀನ್ ವೆಂಕಪ್ಪ, ನಿತ್ಯಾನಂದ ಮಲೆಯಾಳ, ಸುಶ್ಮಿತಾ ಮೋಹನ್ ,ಯೋಗಿತಾ ಬಂಗಾರಕೋಡಿ, ಅಮೃತ್ ಕುಕ್ಕೇಟಿ, ಬಂಗಾರಕೋಡಿ ಶಿವಗಣೇಶ್ ಮತ್ತು ಬಂಗಾರಕೋಡಿ ಚೇತಸ್ ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…