Advertisement
ಸುದ್ದಿಗಳು

ನೀನಾಸಂಗೆ ಆಯ್ಕೆಯಾದ ಮಮತಾ ಕಲ್ಮಕಾರ್‌ಗೆ ರಂಗಮನೆಯಲ್ಲಿ ಬೀಳ್ಕೊಡುಗೆ

Share

ರಾಜ್ಯದ ಅತ್ಯತ್ತಮ ಮತ್ತು ಪ್ರತಿಷ್ಠಿತ ರಂಗ ತರಬೇತಿ ಸಂಸ್ಥೆಯಾದ ನೀನಾಸಂಗೆ ಇತ್ತೀಚೆಗೆ ಆಯ್ಕೆ ಪ್ರಕ್ರಿಯೆ ನಡೆದಿದ್ದು ಸುಳ್ಯ ತಾಲೂಕಿನ ಕಲ್ಮಕಾರಿನ ಮಮತ ಆಯ್ಕೆಯಾಗಿದ್ದಾರೆ.

Advertisement
Advertisement

ರಾಜ್ಯದ ವಿವಿಧ ಕಡೆಗಳಿಂದ ಸುಮಾರು 125 ರಂಗಾಸಕ್ತರು ಭಾಗವಹಿಸಿದ್ದು, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಮತಾ ಕಲ್ಮಕಾರು ಆಯ್ಕೆ ಆಗಿರುವುದು ಹೆಮ್ಮೆಯ ವಿಚಾರ.

Advertisement

ಸುಳ್ಯದ ರಂಗಮನೆಯ ವಿದ್ಯಾರ್ಥಿಯಾಗಿರುವ ಮಮತ ಅರೆಭಾಷೆ ಅಕಾಡೆಮಿ ಪ್ರಾಯೋಜಿತ ʼಸಾಹೇಬ್ರು ಬಂದವೇʼ ನಾಟಕದಲ್ಲಿ ಕಾವೇರಿ ಎಂಬ ಮುಖ್ಯಪಾತ್ರದಲ್ಲಿ ನಟಿಸಿ ಜನಮನ ಗೆದ್ದಿದ್ದಳು. ಅದೂ ಅಲ್ಲದೆ ಒಂದಷ್ಟು ಕಿರುಚಿತ್ರದಲ್ಲಿಯೂ ಭಾಗವಹಿಸಿದ್ದಳು.

ಈಗ ನೀನಾಸಂಗೆ ಹೊರಟಿರುವ ಮಮತಾಗೆ ರಂಗಮನೆಯಲ್ಲಿ ಆತ್ಮೀಯವಾಗಿ ಹರಸಿ ಬೀಳ್ಕೊಡಲಾಯಿತು.

Advertisement

ರಂಗಮನೆಯ ನಿರ್ದೇಶಕ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾದ ಜೀವನ್ ರಾಂ ಸುಳ್ಯ ಅವರು ರಂಗಮನೆಯಲ್ಲಿ ಮಮತ ಕಳೆದ ದಿನಗಳನ್ನು ನೆನೆದು ರಂಗಮನೆಯ ಪರವಾಗಿ ನೆನಪಿನ ಕಾಣಿಕೆ ನೀಡಿ ಹರಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮಿನಾರಾಯಣ ಕಜೆಗದ್ದೆ ಅವರು ಮಾತನಾಡಿ ಅರೆಭಾಷೆ ಅಕಾಡೆಮಿ ವತಿಯಿಂದ ನಾಟಕ‌ ಹಮ್ಮಿಕೊಂಡ ಉದ್ದೇಶ ಮತ್ತು ಅದರಿಂದ ಬಂದ ಪ್ರತಿಫಲವೇ ಇಂದು ಮಮತಳ ಆಯ್ಕೆ‌ ಎಂದು ಸಂತಸ ವ್ಯಕ್ತಪಡಿಸಿದರು. ರವೀಶ್ ಪಡ್ಡಂಬೈಲು ಮತ್ತು ಶಿಕ್ಷಕಿ ಮಮತಾ ಪಡ್ಡಂಬೈಲು ಶುಭ ಹಾರೈಸಿದರು.

ಇದೇ ಸಂದರ್ಭ ಸಾಹೇಬ್ರು ಬಂದವೇ ನಾಟಕ ತಂಡದ ವಿನೋದ್ ಮೂಡಗದ್ದೆ, ಹಾರಂಬಿ ಯತೀನ್ ವೆಂಕಪ್ಪ, ನಿತ್ಯಾನಂದ ಮಲೆಯಾಳ, ಸುಶ್ಮಿತಾ ಮೋಹನ್ ,ಯೋಗಿತಾ ಬಂಗಾರಕೋಡಿ, ಅಮೃತ್ ಕುಕ್ಕೇಟಿ, ಬಂಗಾರಕೋಡಿ ಶಿವಗಣೇಶ್ ಮತ್ತು ಬಂಗಾರಕೋಡಿ ಚೇತಸ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

56 mins ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

1 hour ago

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

3 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

4 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

4 hours ago