ಸೂರ್ಯ ಇಡೀ ಪ್ರಪಂಚಕ್ಕೆ ಬೆಳಕು ಕೊಡುತ್ತಾನೆ. ಚಂದ್ರ ತಂಪಾದ ಬೆಳದಿಂಗಳು ಕೊಡುತ್ತಾನೆ. ಸಸ್ಯಗಳುಇಡೀ ಜೀವಸಂಕುಲಕ್ಕೆ ಪ್ರಾಣವಾಯು ಮತ್ತು ಆಹಾರ ಕೊಡುತ್ತವೆ. ಆದರೆ ಇವು ಯಾವುವೂ ಸಹ ನಾವು ಪರೋಪಕಾರ ಮಾಡುತ್ತಿದ್ದೇವೆ ಅಂಥ ಟಾಂ ಟಾಂ ಹೊಡೆಯುವುದಿಲ್ಲ. ಆದರೆ ಮನುಜ ಮನುಷ್ಯನಿಗೆ ಅಹಂ ಅನ್ನೋದು ಬಂದ್ರೆ ಅವನಿಗೆ ಶತ್ರುಗಳು ಬೇಕಾಗಿಲ್ಲ. ಅವನಿಗೆ ಅವನೇ ಶತ್ರು.
ಹೂಗಳಲ್ಲಿ ಅದ್ಬುತವಾದ ಪರಿಮಳವಿದೆ. ಆನೆಗೆ ಅಪಾರವಾದ ಶಕ್ತಿ ಇದೆ. ನವಿಲಿಗೆ ಮನೋಹರವಾದ ಗರಿಗಳಿವೆ. ಕೋಗಿಲೆಗೆ ಸುಂದರವಾದ ಕಂಠವಿದೆ. ಜಿಂಕೆ ಮೊಲದಂತಹ ಪ್ರಾಣಿಗಳು ನೋಡಲು ಸುಂದರವಾಗಿವೆ. ಜೇನು ಹುಳು ರುಚಿಕರವಾದ ಜೇನುತುಪ್ಪ ತಯಾರಿಸುತ್ತದೆ. ರೇಷ್ಮೆ ಹುಳು ಬೆಲೆ ಬಾಳುವ ರೇಷ್ಮೆ ಎಳೆ ತಯಾರಿಸುತ್ತವೆ. ಪರ್ಲ್ ಓಯ್ಸ್ಟರ್ ಎಂಬ ಕಪ್ಪೆಚಿಪ್ಪಿನ ಪ್ರಾಣಿ ಸುಂದರವಾದ ಮುತ್ತುಗಳನ್ನು ತಯಾರಿಸುತ್ತದೆ. ಆದರೆ ಇವುಗಳಲ್ಲಿ ಯಾವುವೂ ಸಹ ತಾವೇ ಗ್ರೇಟ್ ಅಂಥ ಬೀಗುವುದಿಲ್ಲ ಹಾಗೆ ಭಾವಿಸುವುದೂ ಇಲ್ಲ.
ಆದರೆ ಮನುಷ್ಯ ಅನ್ನೋ ಪ್ರಾಣಿಯಲ್ಲಿ ತಾನು ಗ್ರೇಟ್ ಎನ್ನುವ ಅಹಂ ಇರುತ್ತದೆ. ಮಾತಿಗೆ ಮುಂಚೆ ನಾನು ನಾನು ಅಂಥ ಬಡಬಡಿಸುತ್ತಾನೆ. ನಾನೊಬ್ಬ ಅದ್ಭುತ ಡಾಕ್ಟರ್, ಇಂಜಿನಿಯರ್, ಲಾಯರ್, ಲೇಖಕ, ಕವಿ, ನಟ, ಟೀಚರ್, ಪತ್ರಕರ್ತ, ರಾಜಕಾರಣಿ, ಸಮಾಜ ಸೇವಕ ಹೀಗೆ ಜಂಭ ಕೊಚ್ಚಿಕೊಳ್ಳುತ್ತಿರುತ್ತಾನೆ. ನಾನು ಎಷ್ಟು ಫೇಮಸ್ ಗೊತ್ತಾ? ನಾನು ಎಷ್ಟು ಬುದ್ದಿವಂತ ಗೊತ್ತಾ? ನಾನೆಷ್ಟು ಹ್ಯಾಂಡ್ಸಮ್ ಗೊತ್ತಾ? ನನ್ನ ಬಗ್ಗೆ ಬೇರೆಯವರನ್ನು ಕೇಳು, ನಾನು ಎಷ್ಟು ಗ್ರೇಟ್ ಅಂಥ ಹೇಳ್ತಾರೆ, ನನ್ನನ್ನು ಏನು ಅಂಥ ತಿಳಿದುಕೊಂಡಿದ್ದೀಯ? ನನ್ನ ಬಗ್ಗೆ ನಿನಗೆ ಸರಿಯಾಗಿ ಗೊತ್ತಿಲ್ಲ. ನನ್ನ ಸುದ್ದಿಗೆ ಬಂದರೆ ಚೆನ್ನಾಗಿರಲ್ಲ. ನಾನು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸುತ್ತೀನಿ.
ಹೀಗೆ ಬೇರೆಯವರ ಎದುರು ಬಡಬಡಿಸುತ್ತ, ಭ್ರಮೆಗಳಲ್ಲಿ, ಸ್ವಕುಚ ಮರ್ಧನದಲ್ಲಿ ಆನಂದ ಅನುಭವಿಸುವ ಏಕೈಕ ಪ್ರಾಣಿ ಮನುಷ್ಯ. ತನ್ನನ್ನು ಎಲ್ಲರೂ ಹೊಗಳಲಿ, ಗ್ರೇಟ್ ಅನ್ನಲಿ ಅಂಥ ನಿರೀಕ್ಷೆ ಮಾಡುತ್ತಾನೆ. ಎಂತಹ ಅತಿರಥ ಮಹಾರಥರಾಗಲಿ ಒಂದಲ್ಲ ಒಂದು ದಿನ ಮಣ್ಣಲ್ಲಿ ಮಣ್ಣಾಗಿ ಹೋಗುವುದು ನಿಶ್ಚಿತ. ಬದುಕಿದ್ದಾಗ ಹೀಗೆಲ್ಲಾ ಹಾರಾಡುವ ಮನುಷ್ಯನಿಗೆ, ತಾನು ಸತ್ತ ಕೆಲವು ದಿನಗಳ ನಂತರ ಸಮಾಜ ಇರಲಿ, ತನ್ನ ಮನೆಯವರೂ ಕೂಡ ತನ್ನನ್ನು ನೆನೆಸಿಕೊಳ್ಳುವುದಿಲ್ಲ ಎಂಬ ಸತ್ಯ ತಿಳಿದಿರುವುದಿಲ್ಲ.
ರಮೇಶ್ ಹೆಚ್. ಟಿ. ( ವಾಟ್ಸ್ ಆಪ್ ಬರಹ)
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…