Advertisement
ಕೃಷಿ

ಆತ್ಮನಿರ್ಭರ ಭಾರತ | ಮನ್‌ ಕೀ ಬಾತ್‌ ಮೂಲಕ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Share
ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆ ಹಾಗೂ ಮಲೆನಾಡಿನಲ್ಲಿ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ರೈತರ ನಡುವೆ ಚರ್ಚೆ ಆರಂಭವಾಗಿತ್ತು. ಬಾಳೆಗೊನೆಗೆ ಧಾರಣೆ ಇಲ್ಲ ಎನ್ನುವ ಸಂದರ್ಭದಲ್ಲಿ ರೈತರೇ ಹೊಸದೊಂದು ಪ್ರಯತ್ನಕ್ಕೆ ನಾಂದಿ ಹಾಡಿದ್ದರು. ಅದಕ್ಕೆ ಅಡಿಕೆ ಬೆಳೆಗಾರರ ಪತ್ರಿಕೆಯಾದ ಅಡಿಕೆ ಪತ್ರಿಕೆ ಬೆನ್ನೆಲುಬಾಗಿ ನಿಂತು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರಕ್ಕೆ ಕಾರಣವಾಯಿತು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ  ಬಾಳೆ ಕಾಯಿ ಹುಡಿ ಹಾಗೂ ಉದ್ಯಮದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

Advertisement
Advertisement

 

ಆತ್ಮ ನಿರ್ಭರ ಭಾರತದ ಕನಸಿನ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿಗಳು  ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ ಮಳಿಗೆಯಲ್ಲಿ ಒಂದು ದಿನದಲ್ಲಿ 1 ಕೋಟಿ ರೂ. ವಹಿವಾಟು ನಡೆಯುತ್ತದೆ ಎಂಬುದು ಸಾಬೀತಾಗಿದೆ ಎಂದ ಪ್ರಧಾನಿಗಳು ನಾವು ದೇಶದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡುತ್ತೇವೆ. ಇಲ್ಲಿ ಹೊಸ ಹೊಸ ಉದ್ಯಮದ ಐಡಿಯಾಗಳು ಸಿಗುತ್ತವೆ. ಯುವಕರು ಈ ಮೂಲಕ ಪ್ರೇರಿತರಾಗಿ ಕಾರ್ಯನಿರ್ವಹಣೆ ಮಾಡಲು ಅನುಕೂಲವಾಗಿದೆ. ನಾವು ಹೊಸದನ್ನು ಕಲಿಯಬೇಕಾದರೆ ಪ್ರಯೋಗಳನ್ನು ಮಾಡಬೇಕು. ರೈತರು, ಯುವಕರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ಸು ಕಂಡಿದ್ದಾರೆ. ಅದರಲ್ಲಿ ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಗುಲಾಬ್‌ ಜಾಮೂನು, ದೋಸೆ ಮೊದಲಾದ ಉತ್ಪನ್ನಗಳನ್ನು  ಮಹಿಳೆಯರು ಮಾಡುತ್ತಿದ್ದಾರೆ.ಇಲ್ಲಿ ಹೊಸ ಆವಿಷ್ಕಾರ ಮಹಿಳೆಯರಿಂದಲೇ ಆಗಿದೆ ಎಂದು ಉಲ್ಲೇಖಿಸಿದರು.

 

ಚಿತ್ರ : ಶ್ರೀಪಡ್ರೆ

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ  ವೇಗವಾಗಿ ಬಾ ಕಾ ಹು ಬಗ್ಗೆ ಪ್ರಚಾರ ಪಡೆಯಲು ಅಡಿಕೆ ಪತ್ರಿಕೆ ಹಾಗೂ ಅ ಪ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಅವರು ಕಾರಣರಾಗಿದ್ದಾರೆ. ಬೆಳಗಾವಿಯ‌ ನಯನಾ ಆನಂದ್ ಎಂಬ ಮಹಿಳೆಯ ಕರೆಯ ನಂತರ ಬಾಕಾಹು ಹಿಂದೆ ಬಿದ್ದ ಅಡಿಕೆ ಪತ್ರಿಕೆ ಬಳಗಕ್ಕೆ ಅಜ್ಜಪ್ಪ ಎನ್ನುವ ರೈತರು ಈ ಆವಿಷ್ಕಾರದಲ್ಲಿ  ಮುಂದಿರುವುದು  ತಿಳಿಯಿತು. ಆ ಬಳಿಕ ಕೆಲವೇ ದಿನದಲ್ಲಿ  ಬಾಳೆಕಾಯಿ ಹುಡಿಯ ಬಹುದೊಡ್ಡ ಆಂದೋಲನವೇ ನಡೆದಿದೆ. ಇದೀಗ ಪ್ರಧಾನಿಗಳ ಗಮನವೂ ಸೆಳೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

16 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

17 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

17 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

17 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

17 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

17 hours ago