ಕೃಷಿ

ಆತ್ಮನಿರ್ಭರ ಭಾರತ | ಮನ್‌ ಕೀ ಬಾತ್‌ ಮೂಲಕ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆ ಹಾಗೂ ಮಲೆನಾಡಿನಲ್ಲಿ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ರೈತರ ನಡುವೆ ಚರ್ಚೆ ಆರಂಭವಾಗಿತ್ತು. ಬಾಳೆಗೊನೆಗೆ ಧಾರಣೆ ಇಲ್ಲ ಎನ್ನುವ ಸಂದರ್ಭದಲ್ಲಿ ರೈತರೇ ಹೊಸದೊಂದು ಪ್ರಯತ್ನಕ್ಕೆ ನಾಂದಿ ಹಾಡಿದ್ದರು. ಅದಕ್ಕೆ ಅಡಿಕೆ ಬೆಳೆಗಾರರ ಪತ್ರಿಕೆಯಾದ ಅಡಿಕೆ ಪತ್ರಿಕೆ ಬೆನ್ನೆಲುಬಾಗಿ ನಿಂತು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರಕ್ಕೆ ಕಾರಣವಾಯಿತು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ  ಬಾಳೆ ಕಾಯಿ ಹುಡಿ ಹಾಗೂ ಉದ್ಯಮದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

Advertisement

 

ಆತ್ಮ ನಿರ್ಭರ ಭಾರತದ ಕನಸಿನ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿಗಳು  ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ ಮಳಿಗೆಯಲ್ಲಿ ಒಂದು ದಿನದಲ್ಲಿ 1 ಕೋಟಿ ರೂ. ವಹಿವಾಟು ನಡೆಯುತ್ತದೆ ಎಂಬುದು ಸಾಬೀತಾಗಿದೆ ಎಂದ ಪ್ರಧಾನಿಗಳು ನಾವು ದೇಶದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡುತ್ತೇವೆ. ಇಲ್ಲಿ ಹೊಸ ಹೊಸ ಉದ್ಯಮದ ಐಡಿಯಾಗಳು ಸಿಗುತ್ತವೆ. ಯುವಕರು ಈ ಮೂಲಕ ಪ್ರೇರಿತರಾಗಿ ಕಾರ್ಯನಿರ್ವಹಣೆ ಮಾಡಲು ಅನುಕೂಲವಾಗಿದೆ. ನಾವು ಹೊಸದನ್ನು ಕಲಿಯಬೇಕಾದರೆ ಪ್ರಯೋಗಳನ್ನು ಮಾಡಬೇಕು. ರೈತರು, ಯುವಕರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ಸು ಕಂಡಿದ್ದಾರೆ. ಅದರಲ್ಲಿ ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಗುಲಾಬ್‌ ಜಾಮೂನು, ದೋಸೆ ಮೊದಲಾದ ಉತ್ಪನ್ನಗಳನ್ನು  ಮಹಿಳೆಯರು ಮಾಡುತ್ತಿದ್ದಾರೆ.ಇಲ್ಲಿ ಹೊಸ ಆವಿಷ್ಕಾರ ಮಹಿಳೆಯರಿಂದಲೇ ಆಗಿದೆ ಎಂದು ಉಲ್ಲೇಖಿಸಿದರು.

 

ಚಿತ್ರ : ಶ್ರೀಪಡ್ರೆ

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ  ವೇಗವಾಗಿ ಬಾ ಕಾ ಹು ಬಗ್ಗೆ ಪ್ರಚಾರ ಪಡೆಯಲು ಅಡಿಕೆ ಪತ್ರಿಕೆ ಹಾಗೂ ಅ ಪ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಅವರು ಕಾರಣರಾಗಿದ್ದಾರೆ. ಬೆಳಗಾವಿಯ‌ ನಯನಾ ಆನಂದ್ ಎಂಬ ಮಹಿಳೆಯ ಕರೆಯ ನಂತರ ಬಾಕಾಹು ಹಿಂದೆ ಬಿದ್ದ ಅಡಿಕೆ ಪತ್ರಿಕೆ ಬಳಗಕ್ಕೆ ಅಜ್ಜಪ್ಪ ಎನ್ನುವ ರೈತರು ಈ ಆವಿಷ್ಕಾರದಲ್ಲಿ  ಮುಂದಿರುವುದು  ತಿಳಿಯಿತು. ಆ ಬಳಿಕ ಕೆಲವೇ ದಿನದಲ್ಲಿ  ಬಾಳೆಕಾಯಿ ಹುಡಿಯ ಬಹುದೊಡ್ಡ ಆಂದೋಲನವೇ ನಡೆದಿದೆ. ಇದೀಗ ಪ್ರಧಾನಿಗಳ ಗಮನವೂ ಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

15 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

15 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

24 hours ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

1 day ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

1 day ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago