ಚಿತ್ರ:ಶ್ರೀಪಡ್ರೆ
ಆತ್ಮ ನಿರ್ಭರ ಭಾರತದ ಕನಸಿನ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿಗಳು ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ ಮಳಿಗೆಯಲ್ಲಿ ಒಂದು ದಿನದಲ್ಲಿ 1 ಕೋಟಿ ರೂ. ವಹಿವಾಟು ನಡೆಯುತ್ತದೆ ಎಂಬುದು ಸಾಬೀತಾಗಿದೆ ಎಂದ ಪ್ರಧಾನಿಗಳು ನಾವು ದೇಶದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡುತ್ತೇವೆ. ಇಲ್ಲಿ ಹೊಸ ಹೊಸ ಉದ್ಯಮದ ಐಡಿಯಾಗಳು ಸಿಗುತ್ತವೆ. ಯುವಕರು ಈ ಮೂಲಕ ಪ್ರೇರಿತರಾಗಿ ಕಾರ್ಯನಿರ್ವಹಣೆ ಮಾಡಲು ಅನುಕೂಲವಾಗಿದೆ. ನಾವು ಹೊಸದನ್ನು ಕಲಿಯಬೇಕಾದರೆ ಪ್ರಯೋಗಳನ್ನು ಮಾಡಬೇಕು. ರೈತರು, ಯುವಕರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ಸು ಕಂಡಿದ್ದಾರೆ. ಅದರಲ್ಲಿ ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಗುಲಾಬ್ ಜಾಮೂನು, ದೋಸೆ ಮೊದಲಾದ ಉತ್ಪನ್ನಗಳನ್ನು ಮಹಿಳೆಯರು ಮಾಡುತ್ತಿದ್ದಾರೆ.ಇಲ್ಲಿ ಹೊಸ ಆವಿಷ್ಕಾರ ಮಹಿಳೆಯರಿಂದಲೇ ಆಗಿದೆ ಎಂದು ಉಲ್ಲೇಖಿಸಿದರು.
ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ವೇಗವಾಗಿ ಬಾ ಕಾ ಹು ಬಗ್ಗೆ ಪ್ರಚಾರ ಪಡೆಯಲು ಅಡಿಕೆ ಪತ್ರಿಕೆ ಹಾಗೂ ಅ ಪ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಅವರು ಕಾರಣರಾಗಿದ್ದಾರೆ. ಬೆಳಗಾವಿಯ ನಯನಾ ಆನಂದ್ ಎಂಬ ಮಹಿಳೆಯ ಕರೆಯ ನಂತರ ಬಾಕಾಹು ಹಿಂದೆ ಬಿದ್ದ ಅಡಿಕೆ ಪತ್ರಿಕೆ ಬಳಗಕ್ಕೆ ಅಜ್ಜಪ್ಪ ಎನ್ನುವ ರೈತರು ಈ ಆವಿಷ್ಕಾರದಲ್ಲಿ ಮುಂದಿರುವುದು ತಿಳಿಯಿತು. ಆ ಬಳಿಕ ಕೆಲವೇ ದಿನದಲ್ಲಿ ಬಾಳೆಕಾಯಿ ಹುಡಿಯ ಬಹುದೊಡ್ಡ ಆಂದೋಲನವೇ ನಡೆದಿದೆ. ಇದೀಗ ಪ್ರಧಾನಿಗಳ ಗಮನವೂ ಸೆಳೆದಿದೆ.
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…