Advertisement
ಕೃಷಿ

ಆತ್ಮನಿರ್ಭರ ಭಾರತ | ಮನ್‌ ಕೀ ಬಾತ್‌ ಮೂಲಕ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Share
ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆ ಹಾಗೂ ಮಲೆನಾಡಿನಲ್ಲಿ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ರೈತರ ನಡುವೆ ಚರ್ಚೆ ಆರಂಭವಾಗಿತ್ತು. ಬಾಳೆಗೊನೆಗೆ ಧಾರಣೆ ಇಲ್ಲ ಎನ್ನುವ ಸಂದರ್ಭದಲ್ಲಿ ರೈತರೇ ಹೊಸದೊಂದು ಪ್ರಯತ್ನಕ್ಕೆ ನಾಂದಿ ಹಾಡಿದ್ದರು. ಅದಕ್ಕೆ ಅಡಿಕೆ ಬೆಳೆಗಾರರ ಪತ್ರಿಕೆಯಾದ ಅಡಿಕೆ ಪತ್ರಿಕೆ ಬೆನ್ನೆಲುಬಾಗಿ ನಿಂತು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರಕ್ಕೆ ಕಾರಣವಾಯಿತು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ  ಬಾಳೆ ಕಾಯಿ ಹುಡಿ ಹಾಗೂ ಉದ್ಯಮದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

 

ಆತ್ಮ ನಿರ್ಭರ ಭಾರತದ ಕನಸಿನ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿಗಳು  ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ ಮಳಿಗೆಯಲ್ಲಿ ಒಂದು ದಿನದಲ್ಲಿ 1 ಕೋಟಿ ರೂ. ವಹಿವಾಟು ನಡೆಯುತ್ತದೆ ಎಂಬುದು ಸಾಬೀತಾಗಿದೆ ಎಂದ ಪ್ರಧಾನಿಗಳು ನಾವು ದೇಶದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡುತ್ತೇವೆ. ಇಲ್ಲಿ ಹೊಸ ಹೊಸ ಉದ್ಯಮದ ಐಡಿಯಾಗಳು ಸಿಗುತ್ತವೆ. ಯುವಕರು ಈ ಮೂಲಕ ಪ್ರೇರಿತರಾಗಿ ಕಾರ್ಯನಿರ್ವಹಣೆ ಮಾಡಲು ಅನುಕೂಲವಾಗಿದೆ. ನಾವು ಹೊಸದನ್ನು ಕಲಿಯಬೇಕಾದರೆ ಪ್ರಯೋಗಳನ್ನು ಮಾಡಬೇಕು. ರೈತರು, ಯುವಕರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ಸು ಕಂಡಿದ್ದಾರೆ. ಅದರಲ್ಲಿ ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಗುಲಾಬ್‌ ಜಾಮೂನು, ದೋಸೆ ಮೊದಲಾದ ಉತ್ಪನ್ನಗಳನ್ನು  ಮಹಿಳೆಯರು ಮಾಡುತ್ತಿದ್ದಾರೆ.ಇಲ್ಲಿ ಹೊಸ ಆವಿಷ್ಕಾರ ಮಹಿಳೆಯರಿಂದಲೇ ಆಗಿದೆ ಎಂದು ಉಲ್ಲೇಖಿಸಿದರು.

 

ಚಿತ್ರ : ಶ್ರೀಪಡ್ರೆ

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ  ವೇಗವಾಗಿ ಬಾ ಕಾ ಹು ಬಗ್ಗೆ ಪ್ರಚಾರ ಪಡೆಯಲು ಅಡಿಕೆ ಪತ್ರಿಕೆ ಹಾಗೂ ಅ ಪ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಅವರು ಕಾರಣರಾಗಿದ್ದಾರೆ. ಬೆಳಗಾವಿಯ‌ ನಯನಾ ಆನಂದ್ ಎಂಬ ಮಹಿಳೆಯ ಕರೆಯ ನಂತರ ಬಾಕಾಹು ಹಿಂದೆ ಬಿದ್ದ ಅಡಿಕೆ ಪತ್ರಿಕೆ ಬಳಗಕ್ಕೆ ಅಜ್ಜಪ್ಪ ಎನ್ನುವ ರೈತರು ಈ ಆವಿಷ್ಕಾರದಲ್ಲಿ  ಮುಂದಿರುವುದು  ತಿಳಿಯಿತು. ಆ ಬಳಿಕ ಕೆಲವೇ ದಿನದಲ್ಲಿ  ಬಾಳೆಕಾಯಿ ಹುಡಿಯ ಬಹುದೊಡ್ಡ ಆಂದೋಲನವೇ ನಡೆದಿದೆ. ಇದೀಗ ಪ್ರಧಾನಿಗಳ ಗಮನವೂ ಸೆಳೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

14 minutes ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

2 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

8 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

8 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

16 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

16 hours ago