Advertisement
ಕೃಷಿ

ಆತ್ಮನಿರ್ಭರ ಭಾರತ | ಮನ್‌ ಕೀ ಬಾತ್‌ ಮೂಲಕ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Share
ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆ ಹಾಗೂ ಮಲೆನಾಡಿನಲ್ಲಿ ಬಾಳೆ ಕಾಯಿ ಹುಡಿ (ಬಾಕಾಹು) ಬಗ್ಗೆ ರೈತರ ನಡುವೆ ಚರ್ಚೆ ಆರಂಭವಾಗಿತ್ತು. ಬಾಳೆಗೊನೆಗೆ ಧಾರಣೆ ಇಲ್ಲ ಎನ್ನುವ ಸಂದರ್ಭದಲ್ಲಿ ರೈತರೇ ಹೊಸದೊಂದು ಪ್ರಯತ್ನಕ್ಕೆ ನಾಂದಿ ಹಾಡಿದ್ದರು. ಅದಕ್ಕೆ ಅಡಿಕೆ ಬೆಳೆಗಾರರ ಪತ್ರಿಕೆಯಾದ ಅಡಿಕೆ ಪತ್ರಿಕೆ ಬೆನ್ನೆಲುಬಾಗಿ ನಿಂತು ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರಕ್ಕೆ ಕಾರಣವಾಯಿತು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ  ಬಾಳೆ ಕಾಯಿ ಹುಡಿ ಹಾಗೂ ಉದ್ಯಮದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

Advertisement
Advertisement

 

Advertisement

ಆತ್ಮ ನಿರ್ಭರ ಭಾರತದ ಕನಸಿನ ಬಗ್ಗೆ ಉಲ್ಲೇಖ ಮಾಡಿದ ಪ್ರಧಾನಿಗಳು  ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ ಮಳಿಗೆಯಲ್ಲಿ ಒಂದು ದಿನದಲ್ಲಿ 1 ಕೋಟಿ ರೂ. ವಹಿವಾಟು ನಡೆಯುತ್ತದೆ ಎಂಬುದು ಸಾಬೀತಾಗಿದೆ ಎಂದ ಪ್ರಧಾನಿಗಳು ನಾವು ದೇಶದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡುತ್ತೇವೆ. ಇಲ್ಲಿ ಹೊಸ ಹೊಸ ಉದ್ಯಮದ ಐಡಿಯಾಗಳು ಸಿಗುತ್ತವೆ. ಯುವಕರು ಈ ಮೂಲಕ ಪ್ರೇರಿತರಾಗಿ ಕಾರ್ಯನಿರ್ವಹಣೆ ಮಾಡಲು ಅನುಕೂಲವಾಗಿದೆ. ನಾವು ಹೊಸದನ್ನು ಕಲಿಯಬೇಕಾದರೆ ಪ್ರಯೋಗಳನ್ನು ಮಾಡಬೇಕು. ರೈತರು, ಯುವಕರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ಸು ಕಂಡಿದ್ದಾರೆ. ಅದರಲ್ಲಿ ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಗುಲಾಬ್‌ ಜಾಮೂನು, ದೋಸೆ ಮೊದಲಾದ ಉತ್ಪನ್ನಗಳನ್ನು  ಮಹಿಳೆಯರು ಮಾಡುತ್ತಿದ್ದಾರೆ.ಇಲ್ಲಿ ಹೊಸ ಆವಿಷ್ಕಾರ ಮಹಿಳೆಯರಿಂದಲೇ ಆಗಿದೆ ಎಂದು ಉಲ್ಲೇಖಿಸಿದರು.

Advertisement

 

ಚಿತ್ರ : ಶ್ರೀಪಡ್ರೆ

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ  ವೇಗವಾಗಿ ಬಾ ಕಾ ಹು ಬಗ್ಗೆ ಪ್ರಚಾರ ಪಡೆಯಲು ಅಡಿಕೆ ಪತ್ರಿಕೆ ಹಾಗೂ ಅ ಪ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಅವರು ಕಾರಣರಾಗಿದ್ದಾರೆ. ಬೆಳಗಾವಿಯ‌ ನಯನಾ ಆನಂದ್ ಎಂಬ ಮಹಿಳೆಯ ಕರೆಯ ನಂತರ ಬಾಕಾಹು ಹಿಂದೆ ಬಿದ್ದ ಅಡಿಕೆ ಪತ್ರಿಕೆ ಬಳಗಕ್ಕೆ ಅಜ್ಜಪ್ಪ ಎನ್ನುವ ರೈತರು ಈ ಆವಿಷ್ಕಾರದಲ್ಲಿ  ಮುಂದಿರುವುದು  ತಿಳಿಯಿತು. ಆ ಬಳಿಕ ಕೆಲವೇ ದಿನದಲ್ಲಿ  ಬಾಳೆಕಾಯಿ ಹುಡಿಯ ಬಹುದೊಡ್ಡ ಆಂದೋಲನವೇ ನಡೆದಿದೆ. ಇದೀಗ ಪ್ರಧಾನಿಗಳ ಗಮನವೂ ಸೆಳೆದಿದೆ.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

3 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

4 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

8 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago