ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಗ್ರಾಮೀಣ ಭಾಗದಲ್ಲಿ ಹೊಳೆ, ಹಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಸುಳ್ಯದ ಆಲೆಟ್ಟಿಯ ಬಡ್ಡಡ್ಕ ಬಳಿಯ ಕೂರ್ನಡ್ಕ ಬಳಿ ಹೊಳೆಯ ಪಾಲ ದಾಟುತ್ತಿದ್ದಾಗ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ನೀರು ಪಾಲಾದ ಘಟನೆ ನಡೆದಿದೆ. ಹೊಳೆ ತುಂಬಿ ಹರಿಯುತ್ತಿದ್ದ ಕಾರಣದಿಂದ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಇದುವರೆಗೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ. ಸುಳ್ಯ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ…
ಬೆಂಗಳೂರಿನ ICAR-NBAIR ನಲ್ಲಿ ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ…
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ…
ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು…
ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ…
ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು…