ಕಾಳುಮೆಣಸು ಕೃಷಿಯತ್ತ ಲಕ್ಷ್ಯ ಹರಿಸಿದರೆ, ಕೃಷಿಕರಿಗೆ ಯಶಸ್ಸು ಇರುವುದು ಖಚಿತ. ಬೆಲೆ ಇರುವ ಕೃಷಿಯತ್ತ ವಾಲುವ ಬದಲಾಗಿ ಬೆಲೆ ಉಳಿಸಿಕೊಳ್ಳುವ ಕೃಷಿಯತ್ತ ರೈತರು ಆಸಕ್ತರಾಗಬೇಕು ಎಂದು ಐಸಿಎಆರ್ ಅಪ್ಪಂಗಳದ ಹಿರಿಯ ವಿಜ್ಞಾನಿ ಡಾ.ಅಂಕೇ ಗೌಡ ಹೇಳಿದರು.
ಅವರು ಸುಳ್ಯದ ಎಪಿಎಂಸಿ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ, ಐಸಿಎಆರ್ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ, ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ಆಶ್ರಯದಲ್ಲಿ ನಡೆದ ಕಾಳುಮೆಣಸು ಕೃಷಿಯ ನಿರ್ವಹಣೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಳುಮೆಣಸು ಉತ್ಪಾದನೆಯಲ್ಲಿ ಕರ್ನಾಟಕ ಮುಂದುವರಿಯಬೇಕಿದೆ. ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಬಹುಪಾಲು ಕಡೆ ಕಾಳುಮೆಣಸು ಕೃಷಿಯನ್ನು ಮಾಡಲು ಸಾಧ್ಯ ಇದೆ. ಏಕ ಬೆಳೆಯ ಬದಲು ಮಿಶ್ರ ಬೆಳೆಯು ರೈತರನ್ನು ಸುದೃಢಗೊಳಿಸುತ್ತದೆ. ಅದಕ್ಕಾಗಿ ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯ ಕಡೆಗೂ ಕೃಷಿಕರು ಆಸಕ್ತರಾಗಬೇಕು ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಮಾತನಾಡಿ, ಅಡಿಕೆಯ ಜೊತೆಗೆ ಕಾಳುಮೆಣಸು ಕೃಷಿಯನ್ನೂ ರೈತರು ಬೆಳೆಸಬೇಕಿದೆ. ಈ ಮೂಲಕ ಯಶಸ್ವಿ ಕೃಷಿಕರಾಗಲು ಸಾಧ್ಯ ಎಂದರು.
ಸಭೆಯಲ್ಲಿ ಸುಳ್ಯ ತೋಟಗಾರಿಕಾ ಹಿರಿಯ ನಿರ್ದೇಶಕರಾರ ಸುಹಾನ ಪಿ, ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್, ವಿಜ್ಞಾನಿ ಡಾ.ಪೈಜಲ್ ಉಪಸ್ಥಿತರಿದ್ದರು.ಸುಳ್ಯ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಜಯರಾಮ ಮುಂಡೋಳಿಮೂಲೆ ಸ್ವಾಗತಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…